CrimeNational

ಮತ್ತೆ ಮರಾಠಿಗರ ಪುಂಡಾಟ; ಕರ್ನಾಟಕ ಬಸ್‌ಗೆ ಕಪ್ಪು ಮಸಿ

ಬೆಳಗಾವಿ; ಮರಾಠಿಗರು ಮತ್ತೆ ಪುಂಡಾಟಿಕೆ ಮೆರೆದಿದ್ದಾರೆ. ರಾಜ್ಯ ಸರ್ಕಾರಿ ಬಸ್‌ಗೆ ಮಸಿ ಬಳಿದು, ಜೈ ಮಹಾರಾಷ್ಟ್ರ ಎಂದು ಬಸ್‌ ಮೇಲೆ ಬೆರೆದಿದ್ದಾರೆ. ಔರಂಗಾಬಾದ್‌ ದೌಂಡ್‌ ಗ್ರಾಮದಲ್ಲಿ ಈ ಕೃತ್ಯ ಎಸಗಲಾಗಿದೆ. ಅಖಿಲ ಭಾರತ ಮರಾಠಾ ಸಂಘದ ಕಾರ್ಯಕರ್ತರು ಈ ಕೃತ್ಯ ಎಸಗಿದ್ದಾರೆ.

ನಿಪ್ಪಾಣಿ ಡಿಪೋಗೆ ಸೇರಿದ ಬಸ್‌ ಅಡ್ಡಗಟ್ಟಿರುವ ಮರಾಠಿಗರು, ವಾಹನದ ಮೇಲೆ ಕಪ್ಪು ಮಸಿಯಿಂದ ಜೈ ಮಹಾರಾಷ್ಟ್ರ ಎಂದು ಬರೆದಿದ್ದಾರೆ. ಇದರಿಂದಾಗಿ ಗಡಿಯಲ್ಲಿ ಕನ್ನಡ ಪರ ಸಂಘಟನೆಗಳ ಹೋರಾಟ ಜೋರಾಗಿದೆ. ಮುಂಜಾಗ್ರತಾ ಕ್ರಮವಾಗಿ ರಾಜ್ಯಕ್ಕೆ ಬರುವ ಮಹಾರಾಷ್ಟ್ರದ ಬಸ್‌ಗಳನ್ನು ನಿಲ್ಲಿಸಲಾಗಿದೆ.

 

Share Post