CrimeNational

ಪಟಾಕಿ ಗೋದಾಮಿನಲ್ಲಿ ಭಾರಿ ಸ್ಫೋಟ; ನಾಲ್ವರ ದುರ್ಮರಣ!

ಚೆನ್ನೈ; ದೀಪಾವಳಿ ಹಬ್ಬಕ್ಕೆ ಹತ್ತಿರವಾಗುತ್ತಿದೆ. ಹೀಗಾಗಿ ತಮಿಳುನಾಡಿನಲ್ಲಿ ಪಟಾಕಿ ತಯಾರಿ ಜೋರಾಗಿ ನಡೆಯುತ್ತಿದೆ. ಹೀಗೆ ಪಟಾಕಿ ತಯಾರಿ ವೇಳೆ ಪ್ರತಿ ವರ್ಷವೂ ಒಂದಿಲ್ಲೊಂದು ಪಟಾಕಿ ದುರಂತ ನಡೆಯುತ್ತಲೇ ಇರುತ್ತದೆ. ಈ ಬಾರಿ ಕೂಡಾ ಒಂದು ಹೃದಯವಿದ್ರಾವಕ ಘಟನೆ ನಡೆದಿದೆ. ಪಟಾಕಿ ಗೋದಾಮಿನಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ.

ತಮಿಳುನಾಡಿನ ಮೈಲಾಡುತುರೈನಲ್ಲಿರುವ ಪಟಾಕಿ ಗೋದಾಮಿನಲ್ಲಿ ಈ ದುರಂತ ನಡೆದಿದೆ. ಮಾಣಿಕ್ಕಂ, ಮದನ್, ರಾಘವನ್ ಮತ್ತು ನಿಕೇಶ್  ಮೃತ ದುರ್ದೈವಿಗಳು. ಇನ್ನೂ ನಾಲ್ವರು ಅಲ್ಲಿ ಕೆಲಸ ಮಾಡುತ್ತಿದ್ದರು. ಅವರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ತಮಿಳುನಾಡು ಸರ್ಕಾರ ಮೃತರ ಕುಟುಂಬಗಳಿಗೆ ತಲಾ ಮೂರು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ.

ಈ ಪಟಾಕಿ ಗೋದಾಮಿನ ಮಾಲೀಕ ಮೋಹನ್‌ ಎಂದು ತಿಳಿದುಬಂದಿದೆ. ಪರವಾನಿಗೆ ಪಡೆದೇ ಪಟಾಕಿ ತಯಾರಿಕೆ ಮಾಡುತ್ತಿದ್ದರು. ಆದ್ರೆ ಈ ಘಟನೆ ಯಾಕಾಯ್ತು ಅನ್ನೋದರ ಬಗ್ಗೆ ತನಿಖೆ ನಡೆಯುತ್ತಿದೆ.

 

Share Post