CrimeDistricts

ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ; ಹಿಂದಿನಿಂದ ಲಾರಿಗೆ ಡಿಕ್ಕಿ

ತುಮಕೂರು; ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ತುಮಕೂರು ಬಳಿ ಅಪಘಾತಕ್ಕೀಡಾಗಿದೆ. ಹಿಂದಿನಿಂದ ಕಾರು ಲಾರಿಗೆ ಡಿಕ್ಕಿ ಹೊಡೆದಿದ್ದು, ಸಚಿವರ ಕಾರಿನ ಮುಂಭಾಗ ಜಖಂಗೊಂಡಿದೆ. ನಂದಿಹಳ್ಳಿ ಬಳಿ ಹೆದ್ದಾರಿಯಲ್ಲಿ ಮಧ್ಯರಾತ್ರಿ ಈ ಘಟನೆ ನಡೆದಿದೆ.

ಚಲಿಸುತ್ತಿದ್ದ ಲಾರಿಗೆ ಸಚಿವರ ಕಾರು ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.. ಸಚಿವ ಮಧುಬಂಗಾರಪ್ಪ ಅವರ ಜೊತೆ ಇನ್ನೂ ಮೂವರು ಪ್ರಯಾಣ ಮಾಡುತ್ತಿದ್ದರು. ಎಲ್ಲರೂ ಶಿವಮೊಗ್ಗದಿಂದ ಬೆಂಗಳೂರಿಗೆ ಬರುತ್ತಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದೆ.

ಘಟನೆಯಲ್ಲಿ ಅದೃಷ್ಟವಶಾತ್‌ ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಘಟನೆ ನಂತರ ಸಚಿವ ಮಧು ಬಂಗಾರಪ್ಪ ಅವರು ಬದಲಿ ವಾಹನ ವ್ಯವಸ್ಥೆಯೊಂದಿಗೆ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಬಗ್ಗೆ ಕ್ಯಾತ್ಸಂದ್ರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Share Post