CrimeDistricts

ಮಠ, ಗೋಶಾಲೆಗೆ ಬೆಂಕಿ ಇಟ್ಟು ದುಷ್ಕರ್ಮಿಗಳು!; ಆ ಮಠದಲ್ಲಿ ನಡೆದಿದ್ದೇನು..?

ಮಂಡ್ಯ; ಕಳೆದ ರಾತ್ರಿ ದುಷ್ಕರ್ಮಿಗಳು ಮಠ ಹಾಗೂ ಗೋಶಾಲೆಗೆ ಬೆಂಕಿ ಇಟ್ಟು ಅಟ್ಟಹಾಸ ಮೆರೆದಿದ್ದಾರೆ.. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ಬಳಿಯ ಕೆಆರ್‌ಎಸ್‌ ಸಮೀಪ ಇರುವ ಶನಿ ಮಠದಲ್ಲಿ ಈ ದುರ್ಘಟನೆ ನಡೆದಿದೆ.. ಬೆಂಕಿ ಹಚ್ಚಿರುವ ಕಿಡಿಗೇಡಿಗಳು ಅಲ್ಲಿಂದ ಪರಾರಿಯಾಗಿದ್ದಾರೆ..
ಬೆಂಕಿ ಕೆನ್ನಾಲಿಗೆ ಚಾಚಿದ್ದರಿಂದ ಮಠದ ದೇಗುಲ ಹಾಗೂ ಗೋಶಾಲೆ ಬಹುತೇಕ ಸುಟ್ಟು ಕರಕಲಾಗಿದೆ.. ಗೋಶಾಲೆಯಲ್ಲಿದ್ದ ಗೋವುಗಳನ್ನು ಸ್ಥಳೀಯರ ನೆರವಿನಿಂದ ರಕ್ಷಣೆ ಮಾಡಲಾಗಿದೆ.. ಆದ್ರೆ ಗೋಶಾಲೆ ಹಾಗೂ ದೇಗುಲ ಸಂಪೂರ್ಣ ಸುಟ್ಟುಹೋಗಿದೆ..
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ.. ಮಠದ ಜಾಗಕ್ಕೆ ಸಂಬಂಧಿಸಿದಂತೆ ಕೆಲವರೊಂದಿಗೆ ವಿವಾದವಿತ್ತು.. ಅವರೇ ಈ ದಾಳಿ ನಡೆಸಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.. ದುಷ್ಕರ್ಮಿಗಳು ಎಸ್ಕೇಪ್‌ ಆಗಿದ್ದು ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.. ಕೆಆರ್‌ಎಸ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ..

Share Post