CrimeDistricts

ಮಹಿಳೆ ತಲೆ ಮೇಲೆ ಕಲ್ಲು ಎತ್ತಿಹಾಕಿ ಬೆಂಕಿ ಇಟ್ಟ ದುಷ್ಕರ್ಮಿಗಳು!

ಕಲಬುರಗಿ; ಮಹಿಳೆಯ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ದುಷ್ಕರ್ಮಿಗಳು ನಂತರ ಮೃತದೇಹಕ್ಕೆ ಬೆಂಕಿ ಹಚ್ಚಿ ಸುಟ್ಟಿದ್ದಾರೆ.. ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ನಾಗೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ.. ಜಮೀನೊಂದರಲ್ಲಿ ಮೃತದೇಹ ಸುಟ್ಟುಹಾಕಲಾಗಿದ್ದು, ಪೊಲೀಸರು ಪತ್ತೆ ಹಚ್ಚಿದ್ದಾರೆ..

ಇದನ್ನೂ ಓದಿ; ಮಹಿಳೆಯ ಮೂಗಲ್ಲಿ ರಕ್ತ, ಬಾಯಲ್ಲಿ ನೊರೆ, ಕ್ಷಣಾರ್ಧದಲ್ಲಿ ಸಾವು!; ಏನಿದು ವಿಚಿತ್ರ

ಕಲಬುರಗಿ ನಗರದ ಜಗತ್‌ ಬಡಾವಣೆಯ ನಿವಾಸಿ 45 ವರ್ಷದ ಬಸಮ್ಮ ಎಂಬಾಕೆಯೇ ಕೊಲೆಯಾದ ಮಹಿಳೆಯಾಗಿದ್ದಾಳೆ.. ಕೊಲೆಗಾರರು ಯಾರು ಅನ್ನೋದು ಇನ್ನೂ ಗೊತ್ತಾಗಿಲ್ಲ.. ಮಹಿಳೆಯನ್ನು ಇಲ್ಲಿ ಹೊಲವೊಂದರ ಬಳಿ ಕರೆತಂದು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ. ನಂತರ ಅಲ್ಲಿಯೇ ಪೆಟ್ರೋಲ್‌ ಸುರಿದು ಸುಟ್ಟು ಹಾಕಿದ್ದಾರೆ.. ಸಾಕ್ಷ್ಯ ನಾಶಪಡಿಸೋದಕ್ಕಾಗಿ ಈ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ..

ಇದನ್ನೂ ಓದಿ; ದಕ್ಷಿಣ ಕನ್ನಡದ ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಕತ್ರಿನಾ ಕೈಫ್‌ ಭೇಟಿ

ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು, ಎಎಸ್ಪಿ ಬಿಂದುರಾಣಿ ಸೇರಿದಂತೆ ಶ್ವಾನದಳ, ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.. ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ..

Share Post