CrimeDistricts

ಜೈಲಲ್ಲಿದ್ದ ಮುರುಘಾ ಶರಣರಿಗೆ ಎದೆನೋವು; ಆಸ್ಪತ್ರೆಗೆ ಶಿಫ್ಟ್‌

ಚಿತ್ರದುರ್ಗ; ಲೈಂಗಿಕ ಕಿರುಕುಳ ಆರೋಪದಲ್ಲಿ ಬಂಧಿತರಾಗಿ ಜೈಲು ಸೇರಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ಎದೆನೋವು ಕಾಣಿಸಿಕೊಂಡಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಿಗ್ಗೆ ಅವರ ಆರೋಗ್ಯದಲ್ಲಿ ವ್ಯತ್ಯಯ ಆಗಿದ್ದರಿಂದ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ.

ಎದೆನೋವು ಕಾಣಿಸಿಕೊಂಡಿದೆ ಎಂದು ಹೇಳದ ತಕ್ಷಣ ಜೈಲು‌ ಸಿಬ್ಬಂದಿ ಅವರನ್ನು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ ವಾಹನದಲ್ಲಿ ಜಿಲ್ಲಾ ಆಸ್ಪತ್ರೆಗೆ ಕರೆತಂದಿದ್ದಾರೆ. ವೈದ್ಯರ ತಂಡ ಪರೀಕ್ಷೆ ನಡೆಸಿದೆ. ಎದೆನೋವು ಕಾಣಿಸಿಕೊಂಡಿದ್ದರಿಂದ ಇಸಿಜಿ ಮಾಡಲಾಗುತ್ತಿದೆ ಎಂದು ಮೂಲಗಳು ಮಾಹಿತಿ ನೀಡಿವೆ. ಶುಕ್ರವಾರ ಬೆಳಿಗ್ಗೆ ಜೈಲಿಗೆ ಬಂದ ಮಠದ ಸಿಬ್ಬಂದಿ ಶರಣರಿಗೆ ಮಾತ್ರೆ ಹಾಗೂ ಟೂತ್ ಬ್ರೆಷ, ಪೇಸ್ಟ್, ಬಟ್ಟೆ ನೀಡಿದ್ದಾರೆ. ಇದಾದ ಕೆಲ ಹೊತ್ತನ ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ನಸುಕಿನ 3 ಗಂಟೆಯ ಹೊತ್ತಿಗೆ ಜೈಲು ಸೇರಿದ ಅವರು ನಿದ್ದೆ ಮಾಡಿರಲಿಲ್ಲ ಎನ್ನಲಾಗಿದೆ. ಜೈಲುಪಾಲಾದ ಶಿವಮೂರ್ತಿ ಮುರುಘಾ ಶರಣರಿಗೆ ವಿಚಾರಣಾಧೀನ ಕೈದಿ ಸಂಖ್ಯೆ 2261 ನೀಡಲಾಗಿದೆ. ಜೈಲು ಸುತ್ತಲಿನ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

Share Post