CrimeDistricts

ಮೃತ ವೃದ್ಧೆಯ ಹೆಬ್ಬೆಟ್ಟು ಒತ್ತಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ FIR ದಾಖಲು

ಮೈಸೂರು: ಮೃತ ವೃದ್ಧೆಯ ಹೆಬ್ಬೆಟ್ಟನ್ನು ಖಾಲಿಜಾಗಕ್ಕೆ ಒತ್ತಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ವಿದ್ಯಾರಣ್ಯಪುರಂ  ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ಮೃತ ವೃದ್ಧೆಯ ಹೆಬ್ಬೆಟ್ಟನ್ನು ಪಡೆದ ಸುರೇಶ್ ಮೇಲೆ ಎಫ್‍ಐಆರ್ ದಾಖಲಾಗಿದೆ. ಹೆಬ್ಬೆಟ್ಟನ್ನು ಪಡೆಯುತ್ತಿರುವ ದೃಶ್ಯಗಳನ್ನು ಚಿತ್ರೀಕರಿಸಿರುವ ಕಾವ್ಯ ಪ್ರಕರಣ ದಾಖಲಿಸಿದ್ದಾರೆ.

ಶ್ರೀರಾಂಪುರ ನಿವಾಸಿ ಜಯಮ್ಮನವರು ನವೆಂಬರ್ 16 ರಂದು ವಯೋಸಹಜವಾಗಿ ಮೃತಪಟ್ಟಿದ್ದರು. ಅಂತಿಮ ದರ್ಶನ ಪಡೆಯಲು ಸಂಬಂಧಿಕರಾದ ಕಾವ್ಯ ತೆರಳಿದ್ದಾಗ ಮೃತ ಜಯಮ್ಮರವರ ಅಕ್ಕನ ಮಗ ಸುರೇಶ್ ಆಸ್ತಿಗಾಗಿ ಬಾಂಡ್ ಪೇಪರ್ ಮೇಲೆ ಮೃತ ಜಯಮ್ಮನವರ ಹೆಬ್ಬೆಟ್ಟಿನ ಗುರುತನ್ನು ಒತ್ತಿಸಿಕೊಳ್ಳುತ್ತಿದ್ದರು. ಈ ಬಗ್ಗೆ ಪ್ರಶ್ನೆ ಮಾಡಿದಾಗ ನಿನಗೆ ಏಕೆ ಸುಮ್ಮನಿರು ಎಂದು ಸುರೇಶ್ ಆವಾಜ್ ಹಾಕಿ ಬಾಯಿ ಮುಚ್ಚಿಸಿದ್ದರು.

Share Post