CrimeNational

ನೌಕಾಪಡೆಯ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ; ಏನಾಯ್ತು ಗೊತ್ತಾ..?

ಮುಂಬೈ; ನೌಕಾಪಡೆಯ ಹೆಲಿಕಾಪ್ಟರ್ ಇಲ್ಲಿನ ಕರಾವಳಿ ತೀರದಲ್ಲಿ ತುರ್ತು ಭೂಸ್ಪರ್ಶವಾಗಿದೆ‌. ಹೀಗಾಗಿ ನೌಕಾಪಡೆಯ ಗಸ್ತು ನೌಕೆಯ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು. ಹೆಲಿಕಾಪ್ಟರ್‌ನಲ್ಲಿದ್ದ ಮೂವರು ಪೈಲಟ್‌ಗಳನ್ನು ರಕ್ಷಿಸಲಾಗಿದ್ದು, ಘಟನೆ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ.

ಭಾರತೀಯ ನೌಕಾಪಡೆ ALH ಮುಂಬೈನಿಂದ ಕರಾವಳಿ ತೀರಕ್ಕೆ ಹತ್ತಿರದಲ್ಲಿದ್ದಿದ್ದರಿಂದ ನೌಕಾ ಗಸ್ತು ಕ್ರಾಫ್ಟ್ ನಿಂದ ತಕ್ಷಣವೇ ಕಾರ್ಯಾಚರಣೆ ನಡೆಸಲು ಸಾಧ್ಯವಾಯಿತು. ಕಳೆದ ಅಕ್ಟೋಬರ್‌ನಲ್ಲಿ ಅರುಣಾಚಲ ಪ್ರದೇಶದಲ್ಲಿ ಎಎಲ್‌ಎಚ್ ಪತನಗೊಂಡಿತ್ತು. ಅದರಲ್ಲಿದ್ದ ಐವರು ಸಿಬ್ಬಂದಿ ಮೃತಪಟ್ಟಿದ್ದರು. ಅನಂತರ 300ಕ್ಕೂ ಹೆಚ್ಚು ALH ಗಳ ಸುರಕ್ಷತಾ ತಪಾಸಣೆ ನಡೆಸಲಾಗಿತ್ತು.

Share Post