BengaluruCrime

ಗಂಡನಿಗೆ ಮೊದಲೇ ಮದುವೆ ಆಗಿದ್ದ ವಿಚಾರ ತಿಳಿದು ನವವಧು ಆತ್ಮಹತ್ಯೆ

ಬೆಂಗಳೂರು;  ಗಂಡನಿಗೆ ಈಗಾಗಲೇ ಮೊದವೆಯಾಗಿದೆ ಎಂದು ತಿಳಿದ ನವವಧುವೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಾರತ್‌ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.  ಮಾತರಹಳ್ಳಿಯ ಕಾವೇರಿ ಲೇಔಟ್‍ ವಾಸಿ ಗೌತಮಿ (24) ಸಾವನ್ನಪ್ಪಿದ ನವ ವಧು. ಮಂಗಳವಾರ ಮುಂಜಾನೆ 4 ಗಂಟೆ ಸುಮಾರಿಗೆ ಗೌತಮಿ ಫ್ಯಾನ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಗಾಢನಿದ್ರೆಯಲ್ಲಿದ್ದ ಪತಿ ಪ್ರಸಾದ್ ರೆಡ್ಡಿ ಬೆಳಗ್ಗಿನ ಜಾವ ಕಣ್ಣು ಬಿಟ್ಟಾಗ ಗೌತಮಿ ಫ್ಯಾನಿನಲ್ಲಿ ನೇತಾಡುತ್ತಿರುವುದು ಕಂಡುಬಂದಿದೆ.

ಘಟನೆ ಸಂಬಂಧ ಗೌತಮಿ ತಂದೆ ನೀಡಿದ ದೂರಿನನ್ವಯ ಮಾರತಹಳ್ಳಿ ಪೊಲೀಸರು ಪತಿ ಪ್ರಸಾದ್ ಹಾಗೂ ಆತನ ಮೊದಲ ಪತ್ನಿ ಆಯಿಷಾ ಬಾನು ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗೌತಮಿ ಬಿಕಾಂ ಓದಿದ್ದು, ಆಂಧ್ರಪ್ರದೇಶದ ಪುಂಗನೂರಿನಲ್ಲಿ ಖಾಸಗಿ ಸಂಸ್ಥೆಯೊಂದರ ಉದ್ಯೋಗಿಯಾಗಿದ್ದಳು. ಈ ಸಂದರ್ಭದಲ್ಲಿ ಈಕೆಗೆ ಪ್ರಸಾದ್ ಮೇಲೆ ಲವ್  ಆಗಿದೆ. ಪರಿಣಾಮ ಆಕೆ ಅವನ ಜೊತೆ ಓಡಿ ಬಂದಿದ್ದಾಳೆ. ಬಳಿಕ 2022ರ ಮಾರ್ಚ್ 19ರಂದು ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

 

Share Post