CinemaCrimeLifestyleNational

ತೆಲುಗಿನ ಖ್ಯಾತ ಕೊರಿಯೋಗ್ರಾಫರ್‌ ಚೈತನ್ಯ ಆತ್ಮಹತ್ಯೆ; ವಿಪರೀತ ಸಾಲ ಕಾರಣ

ಹೈದರಾಬಾದ್‌; ಸಾಲಬಾಧೆ ತಾಳಲಾರದೆ ತೆಲುಗಿನ ಖ್ಯಾತ ಕೊರಿಯೋಗ್ರಾಫರ್‌ ಚೈತನ್ಯ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ಕಿರುತೆರೆ ಡ್ಯಾನ್ಸ್‌ ಶೋ ಢೀ ಮೂಲಕ ದೊಡ್ಡ ಹೆಸರು ಮಾಡಿದ್ದ ಚೈತನ್ಯ, ಲೆಜೆಂಡ್‌ ಕೊರಿಯೋಗ್ರಾಫರ್‌ ಪ್ರಭುದೇವ ಅವರ ಜೊತೆಯಲ್ಲೂ ಕೆಲಸ ಮಾಡಿದ್ದರು. ಆದ್ರೆ ಅವರು ವಿಪರೀತ ಸಾಲ ಮಾಡಿಕೊಂಡಿದ್ದು, ಅದನ್ನು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚೈತನ್ಯ ಅವರು ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ವಾಸವಿದ್ದರು. ಆತ್ಮಹತ್ಯೆಗೂ ಮುನ್ನ ವಿಡಿಯೋ ಒಂದನ್ನು ಮಾಡಿಟ್ಟಿದ್ದು, ಅದರಲ್ಲಿ ನನ್ನ ಸಾವಿಗೆ ವಿಪರೀತ ಸಾಲವೇ ಕಾರಣ ಎಂದು ಹೇಳಿಕೊಂಡಿದ್ದಾರೆ. ನನ್ನ ತಂದೆ-ತಾಯಿ ಹಾಗೂ ಸಹೋದರಿ ನನ್ನನ್ನು ಚೆನ್ನಾಗಿ ನೋಡಿಕೊಂಡಿದ್ದರು. ಆದ್ರೆ ಅನಿವಾರ್ಯ ಕಾರಣಗಳಿಗಾಗಿ ಸಾಕಷ್ಟು ಸಾಲ ಮಾಡಿಕೊಂಡಿದ್ದೆ. ಆದ್ರೆ ಅದನ್ನು ತೀರಿಸಲು ಕಷ್ಟವಾಗುತ್ತಿತ್ತು. ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಚೈತನ್ಯ ಹೇಳಿಕೊಂಡಿದ್ದಾರೆ.

Share Post