CrimeNational

ಪುಣ್ಯ ಪ್ರಸಿದ್ಧ ದೇವಾಲಯದ ರಥದ ಚಕ್ರಗಳಿಗೆ ಬೆಂಕಿ ಇಟ್ಟ ದುಷ್ಕರ್ಮಿಗಳು

ಚಿತ್ತೂರು: ಪ್ರಸಿದ್ಧ ಪುಣ್ಯಕ್ಷೇತ್ರವಾದ ಚಿತ್ತೂರು ಕಾಣಿಪಾಕಂ ದೇವಸ್ಥಾನದಲ್ಲಿರುವ ಹಳೆಯ ರಥದ ಚಕ್ರಗಳಿಗೆ ಅಪರಿಚಿತ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಗೋಶಾಲೆಗಳ ಪಕ್ಕದಲ್ಲಿ ಸಂಗ್ರಹಿಸಿಟ್ಟಿದ್ದ ಹಳೆಯ ರಥದ ಚಕ್ರಗಳು ಬೆಂಕಿಗೆ ಆಹುತಿಯಾಗಿವೆ. ವಿಷಯ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಇದರಲ್ಲಿ ಅಪರಿಚಿತ ವ್ಯಕ್ತಿಗಳ ಕೈವಾಡವಿದೆಯೇ? ಅಥವಾ ಬೇರೆಯವರು ಉದ್ದೇಶಪೂರ್ವಕವಾಗಿ ಮಾಡಿದ್ದಾರಾ? ಎಂದು ತನಿಖೆ ನಡೆಸಲಾಗುತ್ತಿದೆ.

ಘಟನೆಯ ಕುರಿತು ಕಾಣಿಪಾಕಂ ದೇವಸ್ಥಾನದ ಅಧಿಕಾರಿಗಳು ಕೂಡ ತನಿಖೆ ಆರಂಭಿಸಿದ್ದಾರೆ.   ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತೇವೆ ಎಂದಿದ್ದಾರೆ.  ಆದರೆ ದೇವಸ್ಥಾನದ ಬಳಿ ಯಾವುದೇ ಸಿಸಿಟಿವಿ ಕ್ಯಾಮೆರಾಗಳಿಲ್ಲ, ದೂರದಲ್ಲಿರುವ ಕ್ಯಾಮರಗಳನ್ನು ಪರಿಶೀಲನೆ ನಡೆಸುವುದಾಗಿನ ತಿಳಿಸಿದ್ದಾರೆ. ದರಂತಕ್ಕೆ  ಕಾರಣದವರನ್ನು ಸುಮ್ಮನೆ ಬಿಡುವುದಿಲ್ಲ ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತೇ ಎಂದು ಪೊಲೀಸರು ತಿಳಿಸಿದ್ದಾರೆ.

Share Post