CrimeDistricts

ಪ್ರೀತಿಗೆ ಒಪ್ಪದ ಪೋಷಕರು; ಯುವಕ ಆತ್ಮಹತ್ಯೆ, ಯುವತಿ ಆಸ್ಪತ್ರೆಗೆ!

ರಾಮನಗರ; ಯುವಕ-ಯುವತಿ ಪರಸ್ಪರ ಪ್ರೀತಿಸುತ್ತಿದ್ದು, ಇವರಿಬ್ಬರ ಮದುವೆಗೆ ಕುಟುಂಬದವರು ಒಪ್ಪಿಲ್ಲ.. ಇದರಿಂದ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.. ಈ ವಿಷಯ ಗೊತ್ತಾಗುತ್ತಿದ್ದಂತೆ ಪ್ರಿಯತಮೆ ಕೂಡಾ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನ ಮಾಡಿದ್ದಾಳೆ.. ರಾಮನಗರದ ಕಾಯಿಸೊಪ್ಪಿನ ಬೀದಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ; ಮುಳಬಾಗಿಲಿನಲ್ಲಿ ಶಿಕ್ಷಕಿಯ ಬರ್ಬರ ಹತ್ಯೆ!; ಕಾರಣ ಏನು..?

24 ವರ್ಷದ ಯಶ್ವಂತ್‌ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾರೆ.. ಈತ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ.. ಆದ್ರೆ ಇವರ ಮದುವೆಗೆ ಯಶ್ವಂತ್‌ ಮನೆಯವರು ಒಪ್ಪಿಲ್ಲ.. ಇದರಿಂದ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.. ಈ ವಿಷಯ ಗೊತ್ತಾಗುತ್ತಿದ್ದಂತೆ ಆತನ ಪ್ರಿಯತಮೆ ಕೂಡಾ ಚುಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.. ಸದ್ಯ ಆಕೆಯ ಸ್ಥಿತಿ ಗಂಭೀರವಾಗಿದ್ದು, ರಾಮನಗರದ ಬಿಎಂ ಆಸ್ಪತ್ರೆಯಲ್ಲಿರುವ ರಾಮಕೃಷ್ಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ..

ಇದನ್ನೂ ಓದಿ; ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂದೆ ಬೈಕ್‌ಗೆ ಬೆಂಕಿ!

ಇಬ್ಬರ ಪ್ರೀತಿ ವಿಷಯ ಗೊತ್ತಾಗುತ್ತಿದ್ದಂತೆ ದೊಡ್ಡ ಜಗಳವಾಗಿತ್ತು.. ಕುಟುಂಬಸ್ಥರ ಜೊತೆ ದೊಡ್ಡ ಜಗಳವಾಗಿತ್ತು.. ಇದಾದ ಮೇಲೆ ಯಶ್ವಂತ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಮನಗರ ಪೊಲೀಸ್‌ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ..

Share Post