CrimeDistrictsPolitics

ಸಿಪಿವೈ ಮೇಲೆ ಮೊಟ್ಟೆ ಎಸೆದ ಜೆಡಿಎಸ್‌ ಕಾರ್ಯಕರ್ತರು

ರಾಮನಗರ; ಚನ್ನಪಟ್ಟಣದಲ್ಲಿ ಅಭಿವೃದ್ದಿ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಕಿತ್ತಾಟ ನಡೆದಿದೆ. ಬೈರಾಪಟ್ಟಣ ಗ್ರಾಮದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವಿನ ಗಲಾಟೆ ನಡೆದಿದ್ದು, ಈ ವೇಳೆ ಜೆಡಿಎಸ್‌ ಕಾರ್ಯಕರ್ತರು ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಮೇಲೆ ಮೊಟ್ಟೆ ಹಾಗೂ ಕಲ್ಲು ಎಸೆದಿದ್ದಾರೆ. ಇದನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್​ ನಡೆಸಿದ್ದಾರೆ.

    ಮುಖ್ಯಮಂತ್ರಿ ವಿಶೇಷ ಅನುದಾನದಲ್ಲಿ ಚನ್ನಪಟ್ಟಣಕ್ಕೆ ಹಣ ಬಿಡುಗಡೆ ಮಾಡಿರುವುದೇ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರ ಹಗ್ಗ ಜಗ್ಗಾಟಕ್ಕೆ ಕಾರಣವಾಗಿದೆ. ಸ್ಥಳೀಯ ಶಾಸಕರೊಂದಿಗೆ ಸಮಾಲೋಚನೆ ನಡೆಸದೇ ಕಾಮಗಾರಿ ಹೇಗೆ ನಡೆಸುತ್ತಿದ್ದಾರೆ ಎಂದು ಜೆಡಿಎಸ್ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದಾರೆ.

ವಿಧಾನ ಪರಿಷತ್ ಸದಸ್ಯ ಸಿ ಪಿ ಯೋಗೇಶ್ವರ್ ಮುಖ್ಯಮಂತ್ರಿಗಳು ತಮ್ಮ ಸ್ವ ಕ್ಷೇತ್ರದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ 50 ಕೋಟಿ ರೂಪಾಯಿ ವಿಶೇಷ ಅನುದಾನ ಬಿಡುಗಡೆ ಮಾಡಿಸಿಕೊಂಡು ಬಂದಿದ್ದರು. ಇಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಶ್ವತ್ಥ್​ ನಾರಾಯಣ್ ಹಾಗೂ ವಿಧಾನ‌ ಪರಿಷತ್ ಶಾಸಕರಾದ ಸಿ.ಪಿ. ಯೋಗೇಶ್ವರ್ ಕಾಂಕ್ರೀಟ್ ರಸ್ತೆ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಲು ಸಿದ್ಧತೆ ಮಾಡಿಕೊಂಡಿದ್ದರು.
Share Post