CrimeNational

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ; ಎನ್‌ಐಎ ತನಿಖೆಗೆ ಶೋಭಾ ಕರಂದ್ಲಾಜೆ ಮನವಿ

ನವದೆಹಲಿ; ದಕ್ಷಿಣ ಕನ್ನಡ ಜಿಲ್ಲೆ ಬೆಳ್ಳಾರೆಯಲ್ಲಿ ಹತ್ಯೆಯಾದ ಪ್ರವೀಣ್‌ ನೆಟ್ಟಾರು ಪ್ರಕರಣವನ್ನು ಎನ್‌ಐಎ ತನಿಖೆಗೆ ಒಪ್ಪಿಸಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ ಮಾಡಿದ್ದಾರೆ. ಬಿಜೆಪಿ ಯುವ ಮುಖಂಡ ಪ್ರವೀಣ್‌ ಕೊಲೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಈ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು. ಆಗ ಮಾತ್ರ ಇದರ ಹಿಂದಿನ ಉದ್ದೇಶ ಹೊರಬರುತ್ತದೆ ಎಂದರು.

ಕರಾವಳಿ ಪ್ರದೇಶದಲ್ಲಿ ಇಂತಹ ದ್ವೇಷದ ಕೊಲೆಗಳು ಹೆಚ್ಚಾಗುತ್ತಿವೆ. ಇದನ್ನು ಮಟ್ಟ ಹಾಕಬೇಕು. ಅದಕ್ಕಾಗಿ ಕಟ್ಟು ನಿಟ್ಟಿನ ಕ್ರಮ ಆಗಬೇಕು. ಹೀಗಾಗಿ ಈ ಪ್ರಕರಣವನ್ನು ಎನ್‌ಐಎ ತನಿಖೆಗೆ ಒಪ್ಪಿಸುವಂತೆ ಕೇಂದ್ರ ಗೃಹಸಚಿವರಿಗೆ ಮನವಿ ಮಾಡೋದಾಗಿ ಸಚಿವ ಶೋಭಾ ಕರಂದ್ಲಾಜೆ ಇದೇ ವೇಳೆ ಹೇಳಿದ್ದಾರೆ.

 

Share Post