BengaluruCrime

ಪಿಎಸ್‌ಐ ನೇಮಕಾತಿ ಹಗರಣ; ಸಚಿವರ ಹೆಸರು ಹೇಳಿದ್ದ ಆರೋಪಿ ಅರೆಸ್ಟ್‌

ಬೆಂಗಳೂರು; ಪಿಎಸ್‌ಐ ಅಕ್ರಮ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಈ ಹಿಂದೆ ವಿಚಾರಣೆ ನಡೆಸಿದ್ದಾಗ ಸಚಿವ ಡಾ.ಅಶ್ವತ್ಥ್‌ ನಾರಾಯಣ್‌ ಹೆಸರು ಹೇಳಿದ್ದಾನೆ ಎನ್ನಲಾದ ಆರೋಪಿ ದರ್ಶನ್‌ ಗೌಡ ಸೇರಿದಂತೆ ಮೂವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

 

ಬಂಧಿತ ದರ್ಶನ್‌ ಗೌಡ ರಾಮನಗರ ಜಿಲ್ಲೆ ಮಾಗಡಿ ಮೂಲದವನು ಎಂದು ತಿಳಿದುಬಂದಿದೆ. ಈತನ ಜೊತೆಗೆ ಹರೀಶ್‌ ಹಾಗೂ ಮೋಹನ್‌ ಎಂಬುವವರನ್ನು ಬಂಧಿಸಲಾಗಿದೆ. ಪ್ರತ್ಯೇಕವಾಗಿ ಮೂರು ಕೇಸ್‌ ದಾಖಲಿಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಪಿಎಸ್‌ಐ ಪರೀಕ್ಷೆಯಲ್ಲಿ ದರ್ಶನ್‌ ಗೌಡ ೧೬೦ ಅಂಕ ಪಡೆದಿದ್ದ. ಹೀಗಾಗಿ ಆತನನ್ನು ಕರೆದು ವಿಚಾರಣೆ ನಡೆಸಲಾಗಿತ್ತು. ಈ ವೇಳೆ ಆತ ಸಚಿವ ಅಶ್ವತ್ಥನಾರಾಯಣ ಹಾಗೂ ಅವರ ಸಹೋದರ ಹೆಸರು ಹೇಳಿದ್ದ ಎಂದು ಹೇಳಲಾಗಿದೆ. ಈ ಕಾರಣಕ್ಕಾಗಿಯೇ ದರ್ಶನ್‌ಗೌಡನನ್ನು ಬಿಟ್ಟು ಕಳುಹಿಸಲಾಗಿದೆ ಎಂದು ಕಾಂಗ್ರೆಸ್‌ ಆರೋಪ ಮಾಡಿತ್ತು. ಇದೀಗ ಸಿಐಡಿ ಪೊಲೀಸರು ದರ್ಶನ್‌ ಗೌಡನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

 

 

ಹರೀಶ್‌ ಹಾಗೂ ಇನ್ನೊಬ್ಬ ವ್ಯಕ್ತಿಯ ಬಂದನ

Share Post