BengaluruCrime

ದರ್ಶನ್‌ ಬಟ್ಟೆಗಳ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆಗಳು ಪತ್ತೆ!

ಬೆಂಗಳೂರು; ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ದರ್ಶನ್‌ ವಿರುದ್ಧ ಮತ್ತಷ್ಟು ಸಾಕ್ಷ್ಯಗಳು ಸಿಕ್ಕಿವೆ.. ಘಟನೆ ದಿನ ದರ್ಶನ್‌ ಧರಿಸಿದ್ದ ಬಟ್ಟೆಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿತ್ತು.. ಅದರ ವರದಿ ಬಂದಿದ್ದು, ಆ ಬಟ್ಟೆಗಳ ಮೇಲೆ ರೇಣುಕಾಸ್ವಾಮಿಯವ ರಕ್ತದ ಕಲೆಗಳು ಇರುವುದು ದೃಢಪಟ್ಟಿದೆ..

ಇದನ್ನೂ ಓದಿ; ಟಿಪ್ಪರ್‌ ಲಾರಿ ಡಿಕ್ಕಿ; ಗರ್ಭಿಣಿ ಹೊಟ್ಟೆಯಿಂದ ಹೊರಬಂದ ಮಗು!

ಪ್ರಕರಣ ಬಯಲಿಗೆ ಬಂದ ಮೇಲೆ ಆರೋಪಿಗಳು ಘಟನೆ ನಡೆದ ದಿನ ಧರಿಸಿದ್ದ ಬಟ್ಟೆಗಳನ್ನು ವಶಪಡಿಸಿಕೊಳ್ಳಲಾಗಿತ್ತು.. ಎ೨ ಆರೋಪಿಯಾಗಿರುವ ದರ್ಶನ್‌ ಅವರ ನೀಲಿ ಬಣ್ಣದ ಜೀನ್ಸ್‌ ಹಾಗೂ ಕಪ್ಪು ಬಣ್ಣದ ರೌಂಡ್‌ ನೆಕ್‌ ಟೀ ಶರ್ಟ್‌ ವಶಪಡಿಸಿಕೊಳ್ಳಲಾಗಿತ್ತು.. ಅದರ ಮೇಲಿನ ಕಲೆಗಳು ರೇಣುಕಾಸ್ವಾಮಿಯ ರಕ್ತದ ಕಲೆಗಳು ಎಂದು ಈಗ ದೃಢಪಟ್ಟಿದೆ..

ಇದನ್ನೂ ಓದಿ; ಪೋಸ್ಟಾಫೀಸ್‌ ಆರ್‌ಡಿ; ತಿಂಗಳಿಗೆ 5 ಸಾವಿರ ಹೂಡಿಕೆ, ಕೈಗೆ ಬರೋದು 8 ಲಕ್ಷ ರೂಪಾಯಿ!

ದರ್ಶನ್‌ ಧರಿಸಿದ್ದ ಬಟ್ಟೆಗಳ ಮೇಲೇ ಕೊಲೆಯಾದವನ ರಕ್ತದ ಕಲೆಗಳು ಪತ್ತೆಯಾಗಿರುವುದರಿಂದ ದರ್ಶನ್‌ ಅವರಿಗೆ ಮತ್ತಷ್ಟು ಕಾನೂನು ಸಂಕಷ್ಟ ಎದುರಾಗಲಿದೆ.. ಕೊಲೆಯಲ್ಲಿ ದರ್ಶನ್‌ ಭಾಗಿಯಾಗಿದ್ದರು ಎಂಬುದಕ್ಕೆ ಇದು ಮಹತ್ವದ ದಾಖಲೆಯಾಗುತ್ತದೆ ಎಂದು ಹೇಳಲಾಗುತ್ತಿದೆ..

Share Post