CrimeDistricts

KSRTC ಹಾಗೂ ಕ್ಯಾಂಟರ್‌ ನಡುವೆ ಭೀಕರ ರಸ್ತೆ ಅಪಘಾತ:ತಪ್ಪಿದ ಅನಾಹುತ

ಚಿಕ್ಕಬಳ್ಳಾಪುರ: ಕೆಎಸ್ಆರ್ಟಿಸಿ ಬಸ್ ಹಾಗೂ ಕ್ಯಾಂಟರ್ ಲಾರಿ ಮುಖಾಮುಖಿ ಡಿಕ್ಕಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 234ರ ಚಿಕ್ಕಬಳ್ಳಾಪುರ ಹಾಗೂ ಗೌರಿಬಿದನೂರು ರಸ್ತೆಯ ಕಣಿವೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪ್ರಯಾಣಿಕರು ಹಾಗೂ ಲಾರಿ ಚಾಲಕ ಪಾರಾಗಿದ್ದಾರೆ. ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ದುರಂತದಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.  ಘಟನೆಯಲ್ಲಿ ಬಸ್ ಹಾಗೂ ಲಾರಿ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಚಿಕ್ಕಬಳ್ಳಾಪುರದಿಂದ ಧರ್ಮಸ್ಥಳಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ತೆರಳುತ್ತಿತ್ತು. ಅದರ ಎದುರು ಗೌರಿಬಿದನೂರಿನಿಂದ ಚಿಕ್ಕಬಳ್ಳಾಪುರಕ್ಕೆ ಕಂಬಿ ತುಂಬಿಕೊಂಡು ಬರುತ್ತಿದ್ದ ಲಾರಿ ಎರಡೂ ವೇಗವಾಗಿ ಬಂದು ರಸ್ತೆ ತಿರುವಿನಲ್ಲಿ ಪರಸ್ಪರ ಡಿಕ್ಕಿ ಹೊಡೆದಿವೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

Share Post