Crime

ಬಿಎಂಟಿಸಿ ಬಸ್‌ ಡಿಕ್ಕಿಯಾಗಿ ಬೈಕ್‌ ಸವಾರ ದುರ್ಮರಣ: ಚಾಲಕ ವಶಕ್ಕೆ

ಬೆಂಗಳೂರು: ದಿನಬೆಳಗಾದ್ರೆ ರಸ್ತೆ ಅಪಘಾತಗಳ ಸಂಖ್ಯೆಗೇನು ಕಡಿಮೆಯಲ್ಲಿ ಒಂದಲ್ಲಾ ಒಂದು ರೀತಿಯಲ್ಲಿ ರಸ್ತೆ ಅಪಘಾತಗಳಿಂದ ಅದೆಷ್ಟೋ ಜನ ಸಾವನ್ನಪ್ಪಿದ್ದಾರೆ. ಇಂದು ಕೂಡ ಕಚೇರಿಗೆ ತೆರಳುವ ಭರದಲ್ಲಿ ಬಂದ ಬೈಕ್‌ ಸವಾರನೊಬ್ಬ ಬಿಎಂಟಿಸಿ ಬಸ್‌ಗೆ ಬಲಿಯಾಗಿದ್ದಾನೆ.

ಹೌದು ಬೈಕ್‌ ಸವಾರನಿಗೆ ಬಿಎಂಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಸಿ.ಜನರಲ್‌ ಆಸ್ಪತ್ರೆ ಬಳಿ ನಡೆದಿದೆ. ಡಿಕ್ಕಿ ರಭಸಕ್ಕೆ ಸವಾರ ಸ್ಥಳದಲೇ ಕೊನೆಯುಸಿರೆಳೆದಿದ್ದಾನೆ. ಲಕ್ಷ್ಮಿದೇವಿನಗರ ನಿವಾಸಿ ಸುರೇಶ್‌ ಮೃತ ದುರ್ದೈವಿಯಾಗಿದ್ದಾನೆ. ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸರು ಬಿಎಂಟಿಸಿ ಬಸ್‌ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಅಪಘಾತ ಸಂಬಂಧ ಮಲ್ಲೇಶ್ವರಂ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ವ್ಯಕ್ತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ.

Share Post