CrimeDistricts

ಶಿರಸಿ ಬಳಿ ಭೀಕರ ರಸ್ತೆ ಅಪಘಾತ; 5 ಮಂದಿ ದಾರುಣ ಸಾವು!

ಶಿರಸಿ; ಉತ್ತರ ಕನ್ನಡ ಜಿಲ್ಲೆ ಶಿರಸಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರ್ಕಾರಿ ಬಸ್‌ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿದ್ದು, ತಮಿಳುನಾಡು ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿರಸಿ ತಾಲ್ಲೂಕಿನ ಬಂಡಲ್‌ ಬಳಿ ಇರುವ ಪೆಟ್ರೋಲ್‌ ಬಂಕ್‌ ಬಳಿ ಈ ದುರಂತ ನಡೆದಿದೆ.

ಕೆಎಸ್‌ಆರ್‌ಟಿಸಿ ಬಸ್‌ ಹುಬ್ಬಳ್ಳಿಯಿಂದ ಭಟ್ಕಳಕ್ಕೆ ಬರುತ್ತಿತ್ತು. ಎದುರಿನಿಂದ ಕಾರು ಬಂದಿದ್ದು ಮುಖಾಮುಖಿ ಡಿಕ್ಕಿಯಾಗಿವೆ. ಕಾರಿನಲ್ಲಿದ್ದ ಐವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿದ್ದ ಕೆಲ ಪ್ರಯಾಣಿಕರಿಗೆ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್‌ನ ಕೆಲ ಭಾಗ ಕೂಡಾ ಹಾನಿಯಾಗಿದೆ.

Share Post