BengaluruCrime

ರಾಜಕೀಯಕ್ಕೆ ಬರ್ತಾನಾ ರೌಡಿಶೀಟರ್‌ ಸೈಲೆಂಟ್‌ ಸುನೀಲ; ಶುರುವಾಯ್ತು ರಾಜಕೀಯ ಗುದ್ದಾಟ

ಬೆಂಗಳೂರು; ರೌಡಿ ಶೀಟರ್ ಸೈಲೆಂಟ್ ಸುನೀಲ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಸಂಸದರಾದ ಪಿ.ಸಿ.ಮೋಹನ್‌ ಹಾಗೂ ತೇಜಸ್ವೀ ಸೂರ್ಯ ಜೊತೆ ಕಾಣಿಸಿಕೊಂಡಿದ್ದ. ಇದು ಈಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸೈಲೆಂಟ್‌ ಸುನೀಲನನ್ನು ಬಿಜೆಪಿ ಚಾಮರಾಜ ಪೇಟೆ ಕ್ಷೇತ್ರದಿಂದ ಕಣಕ್ಕಿಳಿಸಲಾಗುತ್ತೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಈ ಬಗ್ಗೆ ಟ್ವೀಟ್‌ ಮಾಡಿ ಬಿಜೆಪಿಯನ್ನು ಹರಿಹಾಯ್ದಿದೆ. ಇತ್ತ ಸಿಎಂ ಸಿಎಂ ಬೊಮ್ಮಾಯಿ ಕೂಡಾ ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದು, ಕಾಂಗ್ರೆಸ್‌ನಲ್ಲಿ ಎಷ್ಟು ಜನ ರೌಡಿಗಳಿದ್ದಾರೆ ಮೊದಲು ಲೆಕ್ಕ ಹಾಕಲಿ ಎಂದು ತಿರುಗೇಟು ನೀಡಿದ್ದಾರೆ.

ಅಂದಹಾಗೆ, ಅಪರಾಧ ಚಟುವಟಿಕೆ ನಡೆಸುತ್ತಿರುವ ಶಂಕೆ ಹಿನ್ನೆಲೆಯಲ್ಲಿ ನವೆಂಬರ್‌ 23ರಂದು ಬೆಂಗಳೂರು ನಗರದ ರೌಡಿಗಳ ಮನೆಗಳ ಮೇಲೆ ಸಿಸಿಬಿ ದಾಳಿ ಮಾಡಿತ್ತು. ಈ ವೇಳೆ ಸೈಲೆಂಟ್ ಸುನೀಲ ನಾಪತ್ತೆಯಾಗಿದ್ದ. ಇದಾದ ಎರಡು ದಿನಗಳಲ್ಲೇ ದಿಢೀರ್ ಅಂತ ಚಾಮರಾಜಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೈಲೆಂಟ್‌ ಸುನೀಲ ಕಾಣಿಸಿಕೊಂಡಿದ್ದ. ಅಲ್ಲೇ ಪೊಲೀಸರಿದ್ದರೂ ಸೈಲೆಂಟ್ ಸುನೀಲನನ್ನು ವಶಕ್ಕೆ ಪಡೆದಿರಲಿಲ್ಲ. ಇದು ಕೆಲವರ ಆಕ್ರೋಶಕ್ಕೆ ಕಾರಣವಾಗಿದೆ.

Share Post