BengaluruCrime

ದರ್ಶನ್ ವಿರುದ್ಧ ರೌಡಿ ಶೀಟ್ ಓಪನ್ ಮಾಡಲು ಸಿದ್ಧತೆ?

ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ವಿರುದ್ದ ರೌಡಿಶೀಟ್ ಓಪನ್ ಮಾಡಲು ಪೊಲೀಸರು ತಯಾರಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.. ನಾಳೆ ಪೊಲೀಸ್ ಕಸ್ಟಡಿ ಅಂತ್ಯವಾಗಲಿದ್ದು, ನಾಳೆ ಆರೋಪಿಗಳನ್ನು ಕೋರ್ಟ್ ಗೆ ಹಾಜರೂಪಡಿಸಲಾಗುತ್ತದೆ.. ಅನಂತರ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ಇದೆ..

  ರೇಣುಕಾಸ್ವಾಮಿ ಕೊಲೆ ಕೇಸ್ ಅಲ್ಲದೆ, ದರ್ಶನ್ ಮೇಲೆ ಹಲವು ಕೇಸ್ ಗಳಿವೆ. ಹೀಗಾಗಿ ಎಲ್ಲವನ್ನು ಸೇರಿಸಿ ಪುಡಿ ರೌಡಿಗಳ ಪಟ್ಟಿಯಲ್ಲಿ ಕಾಮಾಕ್ಷಿಪಾಳ್ಯ ಹಾಗೂ ರಾಜರಾಜೇಶ್ವರಿ ನಗರ ಠಾಣೆಯಲ್ಲಿ ರೌಡಿ ಶೀಟ್ ಪಟ್ಟಿಗೆ ಸೇರಿಸಲು ಸಿದ್ಧತೆ ನಡೆದಿದೆ ಎನ್ನಲಾಗಿದೆ. ದರ್ಶನ್ ಜೈಲು ಸೇರುತ್ತಿದ್ದಂತೆ ನೋಟೀಸ್ ಕೊಟ್ಟು ಟೌಡಿ ಶೀಟ್ ಗೆ ಸೇರಿಸಲು ಚಿಂತನೆ ನಡೆದಿದೆ ಎಂದು ತಿಳಿದುಬಂದಿದೆ..

 

Share Post