CrimeDistricts

ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ವಂಚನೆ; ಆರೋಪಿ ರೇವಣ್ಣ ಸಿದ್ಧಪ್ಪ ಅರೆಸ್ಟ್‌

ಬಳ್ಳಾರಿ; ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಿವೃತ್ತ ಎಂಜಿನಿಯರ್ ಒಬ್ಬರಿಗೆ ಕೋಟಿ ಕೋಟಿ ಹಣ ವಂಚಿಸಿದ ಆರೋಪ ಕೇಳಿಬಂದಿತ್ತು. ಈ ಪ್ರಕರಣ ಸಂಬಂಧ ಬಿಜೆಪಿಯ ಮಾಜಿ ಮುಖಂಡ, ಕೆಆರ್‌ಪಿಪಿ ನಾಯಕ ರೇವಣ ಸಿದ್ದಪ್ಪನನ್ನು ಕೊಟ್ಟೂರು ಪೊಲೀಸರು  ಬಂಧಿಸಿದ್ದಾರೆ.

ಹಗರಿಬೊಮ್ಮನ ಹಳ್ಳಿ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ರೇವಣ ಸಿದ್ಧಪ್ಪ ನಂಬಿಸಿದ್ದ. ಪುತ್ತೂರು ಮೂಲದ ಶೇಖರ್ ಜೊತೆ ಸೇರಿ ಕೊಟ್ಟೂರಿನ ನಿವೃತ್ತ ಎಂಜಿನಿಯರ್ ಶಿವಮೂರ್ತಿ ಅವರಿಗೆ ಟಿಕೆಟ್‌ ಕೊಡಿಸೋ ಭರವಸೆ ನೀಡಲಾಗಿತ್ತು. ಅವರಿಂದ 1.95 ಕೋಟಿ ರೂ. ಪಡೆದು ವಂಚಿಸಲಾಗಿತ್ತು.

ಆದ್ರೆ ಬೇರೆಯವರಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿತ್ತು. ಹೀಗಾಗಿ ಈ ಬಗ್ಗೆ ಶಿವಮೂರ್ತಿ ಪ್ರಶ್ನಿಸಿದಾಗ ಬೆದರಿಕೆ ಹಾಕಲಾಗಿತ್ತು. ಇದಾದ ಬಳಿಕ ಊರಿನ ಮುಖಂಡರು ರಾಜಿ ಕೂಡ ಮಾಡಿಸಿದ್ದರು. ಈ ವೇಳೆ ಆರೋಪಿ ಚೆಕ್‌ ನೀಡಿದ್ದರು. ಆದ್ರೆ ಚೆಕ್‌ಗಳು ಬೌನ್ಸ್‌ ಆಗಿದ್ದವು.

 

Share Post