CrimeNational

ಆಸ್ಪತ್ರೆ ಬದಲು ಸ್ಮಶಾನಕ್ಕೆ ಕರೆದೊಯ್ದ ಆಂಬ್ಯುಲೆನ್ಸ್‌; ಏಳು ಮಂದಿ ದುರ್ಮರಣ

ಬರೇಲಿ; ಆಂಬ್ಯಲೆನ್ಸ್‌ ಚಾಲಕ ನಿದ್ದೆಗೆ ಜಾರಿದ್ದರಿಂದ ಅಪಘಾತವಾಗಿ ಅದರಲ್ಲಿದ್ದವರಲ್ಲಿ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ದುರಂತ ಉತ್ತರ ಪ್ರದೇಶದ ಬರೇಲಿ ಬಳಿ ಇಂದು ಬೆಳಗ್ಗೆ ನಡೆದಿದೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ದೆಹಲಿಯ ಪಹರ್‌ಗಂಜ್‌ನಿಂದ ಪಿಲಿಭಿತ್‌ಗೆ ಹೋಗುತ್ತಿದ್ದ ಆಂಬ್ಯುಲೆನ್ಸ್ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ನಂತರ ಎದುರಿಗೆ ಬರುತ್ತಿದ್ದ ಮಿನಿಟ್ರಕ್‌ಗೂ ಗುದ್ದಿದೆ.

 

ಘಟನೆಯಲ್ಲಿ ರೋಗಿ ಸೇರಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರೆಲ್ಲರೂ ಪಿಲಿಭಿತ್ ನಿವಾಸಿಗಳೆಂದು ಗುರುತಿಸಲಾಗಿದೆ. ದಾರಿಹೋಕರ ಮಾಹಿತಿ ಮೇರೆಗೆ ಫತೇಗಂಜ್ ಪಶ್ಚಿಮ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದರು. ಆದರೆ, ಅವರೆಲ್ಲರೂ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಸಿಎಂ ಯೋಗಿ ಆದಿತ್ಯನಾಥ್‌ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳ ಸದಸ್ಯರಿಗೆ ಸಂಪೂರ್ಣ ನೆರವು ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆಯೂ ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Share Post