CrimeNational

ಪಿಎಫ್‌ಐ ಪ್ರೇರಿತ ಕೊಲೆಗಳಿಗೆ ಸಿದ್ದರಾಮಯ್ಯ ಅವರೇ ಕಾರಣ; ಪ್ರಹ್ಲಾದ್‌ ಜೋಷಿ

ನವದೆಹಲಿ; ಪಿಎಫ್‌ಐ ಪ್ರೇರಿತ ಕೊಲೆಗಳಿಗೆ ಸಿದ್ದರಾಮಯ್ಯ ಅವರೇ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ಕಿಡಿ ಕಾರಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಪಿಎಫ್‌ಐ ಬ್ಯಾನ್‌ ಮಾಡುವ ಮೂಲಕ ಮುಂದೆ ಆಗಬಹುದಾದ ಭಾರಿ ಅನಾಹುತವನ್ನು ತಪ್ಪಿಸಲಾಗಿದೆ ಎಂದು ಹೇಳಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಕಾರದಿಂದ ಪಿಎಫ್‌ಐ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ದೇಶ ಉಳಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಈ ಕ್ರಮ ಕೈಗೊಂಡಿದೆ. ಸರ್ಕಾರದ ಈ ನಿರ್ಧಾರಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಹ್ಲಾದ್‌ ಜೋಷಿ ಹೇಳಿದ್ದಾರೆ.

Share Post