CrimeDistricts

ಸಿದ್ದರಾಮಯ್ಯ ಎಸ್ಕಾರ್ಟ್‌ ವಾಹನ ಅಪಘಾತ; ಇಬ್ಬರಿಗೆ ಗಾಯ

ಚಿಕ್ಕಮಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಎಸ್ಕಾರ್ಟ್‌ ವಾಹನ ಅಪಘಾತಕ್ಕೀಡಾಗಿರುವ ಘಟನೆ ಇಲ್ಲಿಗೆ ಸಮೀಪದ ಮಲ್ಲೇನಹಳ್ಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಎಸ್ಕಾರ್ಟ್‌ ಸಿಬ್ಬಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.

 

ಪರಿಷತ್‌ ಚುನಾವಣೆ ಪ್ರಚಾರದಲ್ಲಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದರು. ಈ ವೇಳೆ ಈ ಅಪಘಾತ ನಡೆದಿದೆ. ಸಿದ್ದರಾಮಯ್ಯ ಬೆಂಗಾವಲು ವಾಹನದ ಚಕ್ರ ಜಾಮ್‌ ಆಗಿ  ನಿಯಂತ್ರಣ ತಪ್ಪಿದೆ.

ಇದನ್ನು ಗಮನಿಸಿದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಕಾರು ನಿಲ್ಲಿಸಿ, ಎಸ್ಕಾರ್ಟ್‌ ವಾಹನದಲ್ಲಿದ್ದ ಸಿಬ್ಬಂದಿಯನ್ನು ರಕ್ಷಿಸಿದ್ದಾರೆ. ಇಬ್ಬರನ್ನೂ ಬೇರೆ ಕಾರಿನಲ್ಲಿ ಆಸ್ಪತ್ರೆ ಸಾಗಿಸಲು ನೆರವಾಗಿದ್ದಾರೆ.

Share Post