CrimeDistricts

ಹೆತ್ತ ತಾಯಿಯ ಕತ್ತು ಸೀಳಿ ಕೊಂದ ಪಾಪಿ ಮಗ!

ದೊಡ್ಡಬಳ್ಳಾಪುರ; ದುರುಳ ಮಗನೊಬ್ಬ ಹೆತ್ತ ತಾಯಿಯನ್ನೇ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.. ಚಾಕುವಿನಿಂದ ತಾಯಿ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಲಾಗಿದೆ.. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಸಮೀಪದ ರಾಗರಾಳ್ಳಗುಟ್ಟೆ ಎಂಬಲ್ಲಿ ಈ ಕೃತ್ಯ ಎಸಗಲಾಗಿದೆ..

ಗಂಗರಾಜು ಎಂಬಾತನೇ ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ.. 56 ವರ್ಷದ ರತ್ನಮ್ಮ ಕೊಲೆಯಾಗಿರುವ ತಾಯಿ.. ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದೆ ಎನ್ನಲಾಗಿದೆ.. ಈ ವೇಳೆ ಆಕ್ರೋಶಗೊಂಡ ಮಗ  ಗಂಗರಾಜು ಚಾಕುವಿನಿಂದ ತಾಯಿ ಕತ್ತು ಕುಯ್ದು ಕೊಲೆ ಮಾಡಿದ್ದಾನೆ..

ಕೊಲೆ ಮಾಡಿದ ನಂತರ ಆರೋಪಿ ಅಲ್ಲಿಂದ ಎಸ್ಕೇಪ್‌ ಆಗಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತೀವ್ರ ತನಿಖೆ ಆರಂಭಿಸಿದ್ದಾರೆ..

 

Share Post