CrimeDistricts

ಯುವತಿಗೆ 11 ಬಾರಿ ಇರಿದು ಕೊಂದ ಪಾಪಿ; ರಾಜಕಾಲುವೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಆರೋಪಿ ಫಯಾಜ್‌!

ಹುಬ್ಬಳ್ಳಿ; ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿಯೊಬ್ಬಳ ಭೀಕರ ಕೊಲೆಯಾಗಿದ್ದು, ಪಾಗಲ್‌ ಪ್ರೇಮಿಯೊಬ್ಬ ಖಾಸಗಿ ಕಾಲೇಜು ಕ್ಯಾಂಪಸ್‌ನಲ್ಲಿ ಯುವತಿಯನ್ನು ಭೀಕರವಾಗಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಚಾಕುವಿನಿಂದ 11 ಬಾರಿ ಇರಿದುಕೊಂದಿದ್ದ ಆರೋಪಿ ಕೊನೆಗೂ ಸಿಕ್ಕಿಬಿದ್ದಿದ್ದಾನೆ.. ಯುವತಿಯನ್ನು ಕೊಲೆ ಮಾಡಿದ ನಂತರ ಆರೋಪಿ ರಾಜಕಾಲುವೆಯಲ್ಲಿ ಬಚ್ಚಿಟ್ಟುಕೊಂಡಿದ್ದ. ಆತನನ್ನು ಪತ್ತೆ ಹಚ್ಚಿರುವ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ; ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ!; ಕಾರಣ ಏನು..?

ಖಾಸಗಿ ಕಾಲೇಜು ಕ್ಯಾಂಪಸ್‌ನಲ್ಲಿ ದಾರುಣ ಘಟನೆ;
ನಿನ್ನೆ ಹುಬ್ಬಳ್ಳಿ ಖಾಸಗಿ ಕಾಲೇಜೊಂದರ ಕ್ಯಾಂಪಸ್‌ ನಲ್ಲಿ ಈ ಬರ್ಬರ ಹತ್ಯೆ ನಡೆದಿತ್ತು.. ಹುಬ್ಬಳ್ಳಿ ಮಹಾನಗರ ಪಾಲಿಕೆ ಕಾರ್ಪೊರೇಟರ್‌ ನಿರಂಜನ್‌ ಹಿರೇಮಠ್‌ ಪುತ್ರ ನೇಹಾ ಎಂಬಾಕೆಯೇ ಕೊಲೆಗೀಡಾದ ಯುವತಿ. ಬೆಳಗಾವಿ ಮೂಲದ ಫಯಾಜ್‌ ಎಂಬಾತ ಈ ಕೃತ್ಯ ಎಸಗಿ ಪರಾರಿಯಾಗಿದ್ದ. ನಂತರ ಆತ ರಾಜಕಾಲುವೆಯೊಂದರಲ್ಲಿ ಅಡಗಿ ಕುಳಿತಿದ್ದ. ಆತನನ್ನು ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಪ್ರೀತಿ ವಿಚಾರಕ್ಕೆ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗುತ್ತಿದೆ..

ಇದನ್ನೂ ಓದಿ; ಸಿದ್ದರಾಮಯ್ಯ ಸೀಟು ಅಲುಗಾಡುತ್ತಿದೆಯಾ..?; ಸಿಎಂ ಶಿಷ್ಯನೇ ಹೀಗೆ ಹೇಳಿದ್ಯಾಕೆ..?

ಎಬಿವಿಪಿ ಕಾರ್ಯಕರ್ತರಿಂದ ಪ್ರತಿಭಟನೆ;
ಇನ್ನು ಘಟನೆ ಹಿನ್ನೆಲೆಯಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.. ದುಷ್ಕರ್ಮಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹ ಮಾಡಿದ್ದಾರೆ.. ಹುಬ್ಬಳ್ಳಿ-ಧಾರವಾಡ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದು, ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಇಂತಹ ಕೃತ್ಯಗಳಿಗೆ ನೇರ ಹೊಣೆ ರಾಜ್ಯ ಕಾಂಗ್ರೆಸ್‌ ಸರ್ಕಾರದ್ದು ಎಂದು ಆರೋಪ ಮಾಡಲಾಗಿದೆ.. ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ..

ಇದನ್ನೂ ಓದಿ; ಮಾವು ನೈಸರ್ಗಿಕವಾಗಿ ಹಣ್ಣಾಗಿರುವುದಾ ಎಂದು ಪರೀಕ್ಷಿಸುವುದು ಹೇಗೆ?

Share Post