BengaluruCrime

ಆರ್‌ಆರ್‌ ನಗರ ಶಾಸಕ ಮುನಿರತ್ನ ಮನೆ ಮೇಲೆ ಎಸ್‌ಐಟಿ ದಾಳಿ!

ಬೆಂಗಳೂರು; ಆರ್‌ಆರ್‌ ನಗರ ಶಾಸಕ ಮುನಿರತ್ನ ಕಾನೂನು ಸಂಕಷ್ಟ ಎದುರಿಸುತ್ತಿದ್ದಾರೆ. ಒಂದು ಕಡೆ ಬೆದರಿಕೆ ಹಾಗೂ ಜಾತಿನಿಂದನೆ ಆರೋಪ ಇದ್ದರೆ, ಇನ್ನೊಂದೆಡೆ ಹನಿಟ್ರ್ಯಾಪ್‌, ಅತ್ಯಾಚಾರ ಆರೋಪ ಎದುರಿಸುತ್ತಿದ್ದಾರೆ.. ಸದ್ಯ ಬಂಧನವಾಗಿ ವಿಚಾರಣೆ ಎದುರಿಸುತ್ತಿರುವ ಅವರಿಗೆ ಮತ್ತಷ್ಟು ಕಾನೂನು ಸಂಕಟ ಎದುರಾಗುತ್ತಿದೆ.. ಇಂದು ಮುನಿರತ್ನ ನಿವಾಸದ ಮೇಲೆ ಎಸ್‌ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ..
ಬೆಂಗಳೂರಿನ ವೈಯಾಲಿಕಾವಲ್ ನಿವಾಸದ ಮೇಲೆ ಎಸ್​ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ಈ ದಾಳಿ ನಡೆದಿದೆ.. ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.. ಸದ್ಯ ಮೂರು ಕೇಸ್​ಗಳ ಸಂಬಂಧ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ವೈಯಾಲಿಕಾವಲ್ ನಿವಾಸ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಎಸ್​ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಫ್‌ಎಸ್‌ಎಲ್‌ ಅಧಿಕಾರಿಗಳು ಕೂಡಾ ಸ್ಥಳದಲ್ಲಿದ್ದಾರೆ..

Share Post