CrimeDistricts

ತಂದೆಯಿಂದಲೇ ಮಗನ ಬರ್ಬರ ಹತ್ಯೆ; ಮಚ್ಚಿನಿಂದ ಮುಖಕ್ಕೆ ಹೊಡೆದು ಕೊಲೆ!

ರಾಮನಗರ; ಹೆತ್ತ ತಂದೆಯೇ ಮಗನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.. ರಾಮನಗರ ತಾಲ್ಲೂಕಿನ ಲಕ್ಕೋಜನಹಲ್ಳಿ ಗ್ರಾಮದ 31 ವರ್ಷದ ಭಾಸ್ಕರ್‌ ಎಂಬಾತನೇ ಕೊಲೆಯಾದ ವ್ಯಕ್ತಿ.. ತಂದೆ ಕೃಷ್ಣಪ್ಪ ಎಂಬಾತನೇ ಕೊಲೆ ಮಾಡಿದಾತ.

ಕ್ಷುಲ್ಲಕ ಕಾರಣಕ್ಕಾಗಿ ತಂದೆ-ಮಗನ ಜೊತೆ ಜಗಳ ನಡೆದಿದೆ.. ಈ ವೇಳೆ ತಂದೆ ಕೃಷ್ಣಪ್ಪ ಮಗನ ಮುಖದ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ.. ಇದರಿಂದಾಗಿ ತೀವ್ರ ರಕ್ತಸ್ರಾವವಾಗಿ ಮಗ ಭಾಸ್ಕರ್‌ ಸಾವನ್ನಪ್ಪಿದ್ದಾನೆ.. ಹಣಕ್ಕಾಗಿ ಇಬ್ಬರ ನಡುವೆ ಜಗಳ ನಡೆದಿತ್ತು ಎನ್ನಲಾಗಿದೆ..

ಆರೋಪಿ ಕೃಷ್ಣಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.. ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದೆ.. ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Share Post