CrimeDistricts

ನಡು ರಸ್ತೆಯಲ್ಲೇ ಚಾಕುವಿನಿಂದ ಚುಚ್ಚಿ ಚುಚ್ಚಿ ಕೊಲೆ; ಪೊಲೀಸರಿಗೆ ಶರಣಾದ ಆರೋಪಿ

ಚಿಕ್ಕಬಳ್ಳಾಪುರ; ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇತ್ತೀಚೆಗೆ ವೈಯಕ್ತಿಕ ದ್ವೇಷಗಳಿಗೆ ಕೊಲೆಗಳು ಹೆಚ್ಚಾಗಿ ನಡೆಯುತ್ತಿವೆ. ಕಳೆದ ತಡರಾತ್ರಿ ಕೂಡಾ ಒಂದು ಭೀಕರ ಕೊಲೆ ನಡೆದಿದೆ. ನಡುರಸ್ತೆಯಲ್ಲೇ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ. ಚಿಕ್ಕಬಳ್ಳಾಪುರ ಪಟ್ಟಣದ ಟಿಪ್ಪು ನಗರದಲ್ಲಿ ಈ ಕೃತ್ಯ ಎಸಗಲಾಗಿದೆ.

26 ವರ್ಷದ ಜಬೀರ್‌ ಪಾಷಾ ಅಲಿಯಾಸ್‌ ನೇಪಾಳ್‌ ಎಂಬಾತನೇ ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಆರೋಪಿ ಮುಕ್ತಿಯಾರ್‌ ಕೊಲೆ ಮಾಡಿದ ನಂತರ ನೇರವಾಗಿ ಪೊಲೀಸ್‌ ಠಾಣೆಗೆ ಬಂದು ಶರಣಾಗಿದ್ದಾನೆ. ಈ ಘಟನೆ ನೋಡಿ ಚಿಂತಾಮಣಿ ಪಟ್ಟಣದ ಜನ ಬೆಚ್ಚಿಬಿದ್ದಿದ್ದಿದ್ದಾರೆ.

ಆರೋಪಿ ಮುಕ್ತಿಯಾರ್‌ ಪತ್ನಿಯ ಜೊತೆ ಕೊಲೆಯಾದ ಜಬೀರ್‌ ಪಾಷಾ ಅನೈತಿಕ ಸಂಬಂಧ ಇಟ್ಟುಕೊಂಡಿದ್ದನಂತೆ. ಈ ವಿಚಾರ ಮುಕ್ತಿಯಾರ್‌ಗೆ ಗೊತ್ತಾಗಿದೆ. ಇದೇ ವಿಚಾರವಾಗಿ ಕಳೆದ ರಾತ್ರಿ ಟಿಪ್ಪು ನಗರದ ರಸ್ತೆಯಲ್ಲೇ ಇಬ್ಬರ ನಡುವೆ ದೊಡ್ಡ ಜಗಳವಾಗಿದೆ. ಇದೇ ವೇಳೆ ಮುಕ್ತಿಯಾರ್‌ ಚಾಕುವಿನಿಂದ ಜಬೀರ್‌ ಪಾಷಾಗೆ ಚುಚ್ಚಿ ಚುಚ್ಚಿ ಸಾಯಿಸಿದ್ದಾನೆ. ಅನಂತರ ಪೊಲೀಸರಿಗೆ ಶರಣಾಗಿದ್ದಾನೆ.

ಮೃತದೇಹವನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದ್ದು, ಇಂದು ಮರಣೋತ್ತರ ಪರೀಕ್ಷೆ ಮಾಡಲಾಗುತ್ತದೆ. ಘಟನೆ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ.

Share Post