BengaluruCrime

ಶಾಸಕ ವಿಶ್ವನಾಥ್‌ ಪರವಾಗಿ ಪ್ರತಿಭಟನೆ; ಬೆಂಬಲಿಗನ ಆತ್ಮಹತ್ಯೆ ಯತ್ನ

ಬೆಂಗಳೂರು: ಯಲಹಂಕ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಕೊಲೆಗೆ ಸ್ಕೆಚ್‌ ಹಾಕಿರುವ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ಶಾಸಕರ ಬೆಂಬಲಿಗರು, ಬೆಂಗಳೂರು-ತುಮಕೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಶಾಸಕ ವಿಶ್ವನಾಥ್‌ ಬೆಂಬಲಿಗರೊಬ್ಬರು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಮಾದನಾಯಕನಹಳ್ಳಿ ಬಳಿ ಶಾಸಕರ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ವಿಶ್ವನಾಥ್‌ ಬೆಂಬಲಿಗ ಗೋಪಾಲ್‌ ಎಂಬುವವರು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಕಾರ್ಯಪ್ರವೃತ್ತರಾದ ಪೊಲೀಸರು ಆತನನ್ನು ತಡೆದು, ರಕ್ಷಣೆ ಮಾಡಿದ್ದಾರೆ.

Share Post