CrimeNational

ಪತ್ನಿಯ ಜೊತೆ ಅಕ್ರಮ ಸಂಬಂಧ ಶಂಕೆ; ಸಬ್‌ಇನ್ಸ್‌ಪೆಕ್ಟರ್‌ ಮರ್ಮಾಂಗ ಕತ್ತರಿಸಿದ ಕಾನ್ಸ್‌ಟೇಬಲ್‌!

ಮೆಹಬೂಬ್‌ನಗರ; ಮಹಬೂಬ್‌ನಗರ ಜಿಲ್ಲೆಯಲ್ಲಿ ಚಾಕು ಇರಿತ ಪ್ರಕರಣ ಸಂಚಲನ ನಡೆದಿದೆ. ಸಬ್‌ಇನ್ಸ್‌ಪೆಕ್ಟರ್‌ ಒಬ್ಬರ ಮೇಲೆ ಕಾನ್‌ಸ್ಟೆಬಲ್ ಚಾಕುವಿನಿಂದ ದಾಳಿ ನಡೆಸಿ, ಮರ್ಮಾಂಗ ಕತ್ತರಿಸಿದ್ದಾನೆ. ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆಂಬ ಶಂಕೆ ವ್ಯಕ್ತಪಡಿಸಿರುವ ಕಾನ್ಸ್‌ಟೇಬಲ್‌, ಸಬ್‌ಇನ್ಸ್‌ಪೆಕ್ಟರ್‌ ಮೇಲೆ ದಾಳಿ ನಡೆಸಿದ್ದು, ಈಗ ಅವರ ಪರಿಸ್ಥಿತಿ ಗಂಭೀರವಾಗಿದೆ. ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೆಹಬೂಬ್‌ನಗರ ಜಿಲ್ಲೆಯಲ್ಲಿ ಈ ದುಷ್ಕೃತ್ಯ ನಡೆದಿದೆ.  ಇಫ್ತೆಕರ್ ಅಮ್ಮದ್ ಅವರು ಮೆಹಬೂಬ್‌ನಗರ ಜಿಲ್ಲೆಯಲ್ಲಿ ಸಿಸಿಎಸ್ ಸಿಐ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಂದು ಬೆಳಗ್ಗೆ ಕಾನ್ ಸ್ಟೇಬಲ್ ಜಗದೀಶ್ ಅವರು ಏಕಾಏಕಿ ಅವರ ಮೇಲೆ ದಾಳಿ ಮಾಡಿ ಮರ್ಮಾಂಗ ಕತ್ತರಿಸಿದ್ದಾರೆ.

ಕಾನ್ಸ್‌ಟೇಬಲ್‌ ಜಗದೀಶ್‌ ಪತ್ನಿ ಕೂಡಾ ಕಾನ್ಸ್‌ಟೇಬಲ್‌ ಆಗಿದ್ದಾರೆ. ಸಬ್‌ ಇನ್ಸ್‌ಪೆಕ್ಟರ್‌ ಅಮ್ಮದ್ ಅವರು ತನ್ನ ಪತ್ನಿಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂದು ಕಾನ್ಸ್‌ಟೇಬಲ್‌ ಜಗದೀಶ್‌ ಅನುಮಾನ ವ್ಯಕ್ತಪಡಿಸಿದ್ದಾರೆ. ಇದೇ ಶಂಕೆ ಹಿನ್ನೆಲೆಯಲ್ಲಿ ಜಗದೀಶ್‌ ಈ ದಾಳಿ ಮಾಡಿದ್ದಾನೆ. ಸಹ ಸಿಬ್ಬಂದಿ ಕೂಡಲೇ ಎಸ್‌ಐ ಇಫ್ತೆಕರ್‌ ಅಹಮದ್‌ ಅವರನ್ನು ಮೊದಲಿಗೆ ಮೆಹಬೂಬ್‌ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಅನಂತರ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ಗೆ ರವಾನಿಸಿದ್ದಾರೆ.

ಡಿಐಜಿ ಚೌಹಾಣ್ ಮತ್ತು ಎಸ್ಪಿ ಹರ್ಷವರ್ಧನ್ ಸ್ಥಳಕ್ಕೆ ಆಗಮಿಸಿ ಘಟನೆಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ವಿವಾಹೇತರ ಸಂಬಂಧದ ಹಿನ್ನಲೆಯಲ್ಲಿ ಈ ಘಟನೆ ನಡೆದಿದೆ ಎಂಬ ವರದಿಗಳಿದ್ದರೂ ಈ ಘಟನೆ ಪೊಲೀಸ್ ವಲಯದಲ್ಲಿ ಸಂಚಲನ ಮೂಡಿಸುತ್ತಿದೆ. ಆದರೆ, ಈ ಪ್ರಕರಣದ ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Share Post