CrimeDistricts

ನೀರು ತರಲು ಹೋಗಿದ್ದ ಶಿಕ್ಷಕ ಆಯತಪ್ಪಿ ಹೊಂಡದಲ್ಲಿ ಮುಳುಗಿ ಸಾವು

ಕಲಬುರಗಿ: ನೀರು ತರಲು ಹೋಗಿ ಆಯತಪ್ಪಿ ಹೊಂಡಕ್ಕೆ ಬಿದ್ದು ಶಿಕ್ಷಕ ಸಾವನ್ನಪ್ಪಿರುವ ಘಟನೆ ಅಫಜಲಪುರ ತಾಲೂಕು ತೆಲ್ಲೂರ್ ಗ್ರಾಮದಲ್ಲಿ ನಡೆದಿದೆ. ಮಲ್ಲಣ್ಣ ಮಡಿವಾಳ (30) ಬಾವಿಯಲ್ಲಿ ಬಿದ್ದು ಸಾವನ್ನಪ್ಪಿದ ಶಿಕ್ಷಕ. ತಮ್ಮ ಜಮೀನಿನಲ್ಲಿರುವ ಬಾವಿಯಲ್ಲಿ ನೀರು ತರಲು ಹೋದಾಗ ಮಲ್ಲಣ್ಣ ಕಾಲು ಜಾರಿ ಹೊಂಡದಲ್ಲಿ ಬಿದ್ದಿದ್ದಾರೆ. ಈಜು ಬರದ ಕಾರಣ ಶಿಕ್ಷಕ ಪ್ರಾಣ ಕಳೆದುಕೊಂಡಿದ್ದಾರೆ.

ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿದ್ದ ಮಲ್ಲಣ್ಣ, ಹೊಲದಲ್ಲಿರುವ ಕಡಲೆ ಬೆಳೆಗೆ ಕ್ರಿಮಿನಾಶಕ ಔಷಧಿ ಹೊಡೆಯಲು ನೀರು ತರಲು ಹೋಗಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿನೀಡಿ ಪರಿಶೀಲನೆ ಮಾಡಿದ್ದಾರೆ. ಈ ಕುರಿತು ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Post