CrimeDistricts

ನಿಂತಿದ್ದ ಬಸ್‌ಗೆ ಟೆಂಪೋ ಟ್ರಾವೆಲರ್‌ ಡಿಕ್ಕಿ; ಇಬ್ಬರ ದುರ್ಮರಣ

ತುಮಕೂರು; ತುಮಕೂರು ಬಳೀ ಭೀಕರ ಅಪಘಾತ ನಡೆದಿದೆ. ನಿಂತಿದ್ದ ಬಸ್‌ಗೆ ಟಿಟಿ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನಾಲ್ವರು ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಕುಣಿಗಲ್‌ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ.

ಕುಣಿಗಲ್ ತಾಲೂಕಿನ ರಾಜ್ಯ ಹೆದ್ದಾರಿ 33ರ ಹುಲಿಯೂರು ದುರ್ಗ ಹೋಬಳಿಯ ಡಿ.ಹೊಸಹಳ್ಳಿ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ರಾಯಚೂರು ಜಿಲ್ಲೆ ಸಿಂಧನೂರು ನಿವಾಸಿ ಹಾಗೂ ಟಿಟಿ ಚಾಲಕ ವೀರೇಶ್ (30) ಹಾಗೂ ಶಶಿಕಲಾ (69) ಸಾವನ್ನಪ್ಪಿರುವ ದುರ್ದೈವಿಗಳು. ದಿಲೀಪ್ ಕುಮಾರ್, ಆನಂದ್ ಕುಮಾರ್, ಪ್ರಿಯಾ ಹಾಗೂ ಪ್ರತೀಕ್ಷ ಎಂಬವವರು ಗಾಯಗೊಂಡಿದ್ದು, ತುಮಕೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಾಗಿದೆ.

ಶಶಿಕಲಾ ಅವರ ಕುಟುಂಬದ ಹನ್ನೊಂದು ಮಂದಿ ಪ್ರವಾಸಕ್ಕೆ ಹೊರಟಿತ್ತು. ಮೈಸೂರಿಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

Share Post