CrimeDistricts

ನಾಗಮಂಗಲ ಬಳಿ ಭೀಕರ ಅಪಘಾತ; ಮೂವರ ದುರ್ಮರಣ!

ಮಂಡ್ಯ; ಮಂಡ್ಯ ಜಿಲ್ಲೆ ನಾಗಮಂಗಲ ಬಳಿ ಭೀಕರ ಅಪಘಾತ ಸಂಭವಿಸಿದೆ.. ಇಲ್ಲಿನ ರಾಮನಹಳ್ಳಿ ಬಳಿ ಗೂಡ್ಸ್ ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ..

  ನಾಗಮಂಗಲ ಹಾಗೂ ಪಾಂಡವಪುರ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.. ಸಿದ್ದೇಶ್ ಹಾಗೂ ಯುವರಾಜ್ ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದರೆ, ತಿಪ್ಪೇಸ್ವಾಮಿ ಎಂಬುವವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೂವರು ಕೂಡಾ ಚಿತ್ರದುರ್ಗದವರು ಎಂದು ತಿಳಿದುಬಂದಿದೆ..

  ಮೃತರೆಲ್ಲರೂ ಕಾರಿನಲ್ಲಿದ್ದವರೇ ಆಗಿದ್ದಾರೆ. ನಾಗಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದೆ..

 

Share Post