CrimeDistricts

ಶಿವಮೊಗ್ಗ ಬಳಿ ಭೀಕರ ಅಪಘಾತ; ನಾಲ್ವರು ಸಾವನ್ನಪ್ಪಿರುವ ಶಂಕೆ

ಶಿವಮೊಗ್ಗ; ಶಿವಮೊಗ್ಗ ಬಳಿಯ ಚೋರಡಿ ಬಳಿ ಎರಡು ಖಾಸಗಿ ಬಸ್‌ಗಳ ನಡುವೆ ಭೀಕರ ಅಪಘಾತ ನಡೆದಿದೆ. ಕುಂಸಿ ಬಳಿಯ ಕುಮಧ್ವತಿ ಸೇತುವೆ‌ ಮೇಲೆ ಎರಡು ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಸುಮಾರು ನಾಲ್ಕು ಜನ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಒಂದು ಬಸ್‌ ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದು, ಇನ್ನೊಂದು ಬಸ್‌ ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಹೋಗುತ್ತಿತ್ತು ಎಂದು ತಿಳಿದುಬಂದಿದೆ.

ಎರಡೂ ಬಸ್‌ಗಳು ವೇಗವಾಗಿ ಚಲಿಸುತ್ತಿದ್ದರಿಂದ ಅಪಘಾತವಾಗಿ ಭೀಕರವಾಗಿದೆ. ಎರಡೂ ಬಸ್‌ಗಳು ಒಂದಕ್ಕೊಂದು ಕಚ್ಚಿಕೊಂಡಿವೆ. ಹಲವು ಪ್ರಯಾಣಿಕರು ಬಸ್‌ನಲ್ಲೇ ಸಿಲುಕಿದ್ದು, ಅವನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ಹತ್ತು ಅಂಬುಲೆನ್ಸ್‌ಗಳು ಆಗಮಿಸಿದ್ದು ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಎರಡು ಬಸ್‌ಗಳು ಡಿಕ್ಕಿಯಿಂದಾಗಿ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಹೀಗಾಗಿ ಹೆದ್ದಾರಿಯನ್ನು ಬಂದ್‌ ಮಾಡಲಾಗಿದೆ.

Share Post