CrimeInternational

ಬರ್ತ್‌ ಡೇ ದಿನವೇ ಭೀಕರ ಅಪಘಾತ; ದೇವಸ್ಥಾನದ ಬಳಿಯೇ ತಾಯಿ, ಮಗು ದಾರುಣ ಸಾವು!

ಮೊನ್ನೆ ತಾಯಿ ಅಪ್ರಾಪ್ತ ಬಾಲಕಿಯೊಬ್ಬಳು ಹುಟ್ಟಹಬ್ಬದ ದಿನವೇ ಸಾವನ್ನಪ್ಪಿದ್ದಳು.. ಹನ್ನೊಂದು ವರ್ಷದ ಬಾಲಕಿ ಹುಟ್ಟುಹಬ್ಬಕ್ಕೆ ಆನ್‌ಲೈನ್‌ ಮೂಲಕ ಕೇಕ್‌ ತರಿಸಲಾಗಿತ್ತು.. ಆ ಕೇಕ್‌ ತಿಂದಿದ್ದ ಬಾಲಕಿ ಮಧ್ಯರಾತ್ರಿ ವಾಂತಿ ಮಾಡಿಕೊಂಡು ಸಾವನ್ನಪ್ಪಿದ್ದಳು.. ಇದು ಇಡೀ ದೇಶವನ್ನು ಬೆಚ್ಚಿಬೀಳಿಸಿತ್ತು.. ಹೀಗಿರುವಾಗಲೇ ಹುಟ್ಟುಹಬ್ಬದ ದಿನದಂದೇ ತಾಯಿ-ಮಗಳು ಇಬ್ಬರೂ ಅಪಘಾತಕ್ಕೆ ಬಲಿಯಾಗಿದ್ದಾರೆ.. ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಹೋಗಿದ್ದ ತಾಯಿ-ಮಗುವಿಗೆ ಅಪಘಾತವಾಗಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ..

ಇದನ್ನೂ ಓದಿ; Crime; ಹೈಕೋರ್ಟ್‌ನಲ್ಲೇ ಕತ್ತು ಕುಯ್ದುಕೊಂಡ ವ್ಯಕ್ತಿ; ಮುಂದೇನಾಯ್ತು..?

ಅಮೆರಿಕಾದ ಒರೆಗಾನ್​ನಲ್ಲಿ ಇಂತಹದ್ದೊಂದು ಭೀಕರ ಅಪಘಾತ ಸಂಭವಿಸಿದೆ.. ಮೃತರಯ ಆಂಧ್ರಪ್ರದೇಶದ ಕೋನಕಂಚಿ ಮೂಲದವರು ಎಂದು ತಿಳಿದುಬಂದಿದೆ,, ಗೀತಾಂಜಲಿ ಹಾಗೂ ನರೇಶ್‌ ಬಾಬು ದಂಪತಿ ಇಬ್ಬರೂ ಕೂಡಾ ಸಾಫ್ಟ್‌ವೇರ್‌ ಎಂಜಿನಿಯರ್‌ಗಳಾಗಿದ್ದರು.. ಇಬ್ಬರೂ ಅಮೆರಿಕದಲ್ಲಿ ಕೆಲಸ ಮಾಡುತ್ತಿದ್ದರು.. ಇವರಿಗೆ ಇಬ್ಬರು ಮಕ್ಕಳಿದ್ದು, ಅದರಲ್ಲಿ ಒಂದು ಮಗು ಸಾವನ್ನಪ್ಪಿದೆ.. ಜೊತೆಗೆ ಗೀತಾಂಜಲಿ ಕೂಡಾ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ; ಸಚಿವ ಸುಧಾಕರ್‌, ಕೃಷ್ಣಬೈರೇಗೌಡ ಇದಾರೆ ಅಂತ ಮೆರೆದರೆ ಅಷ್ಟೇ; ಡಿಕೆಶಿ ಹೇಳಿದ್ದು ಯಾರಿಗೆ..?

ಮಾರ್ಚ್‌ 30ರಂದು ಗೀತಾಂಜಿಯವರ ಹುಟ್ಟುಹಬ್ಬ ಇತ್ತು.. ಹೀಗಾಗಿ ಎಲ್ಲರೂ ಸಂಭ್ರಮದಲ್ಲಿದ್ದರು.. ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮನೆಯವರೆಲ್ಲ ದೇವಸ್ಥಾನ ತೆರಳುತ್ತಿದ್ದರು.. ಈ ವೇಳೆ ಸಿಗ್ನಲ್‌ ಬಳಿ ಈ ಘಟನೆ ನಡೆದಿದೆ.. ಅಪಘಾತದಿಂದ ಸುಮಾರು ಐದು ಗಂಟೆಗಳ ಕಾಲ ಇಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು ಎಂದು ತಿಳಿದುಬಂದಿದೆ.. ಘಟನೆಯಲ್ಲಿ ಗೀತಾಂಜಲಿ ಗಂಡ ನರೇಶ್‌ ಬಾಬು, ಮಗ ಗಾಯಗೊಂಡಿದ್ದಾರೆ.. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.. ಅಂದು ಗೀತಾಂಜಲಿ ಅವರು ಹುಟ್ಟುಹಬ್ಬ ಆಗಿತ್ತು. ಹೀಗಾಗಿ ಇವರು ಕೊಂಚ ದೂರದಲ್ಲಿರುವ ದೇವಸ್ಥಾನಕ್ಕೆ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ತವರಿಗೆ ಕಳುಹಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಅಮೆರಿಕದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ; ಕೆಂಪು ಮೊಟ್ಟೆ ಒಳ್ಳೆಯದಾ..?, ಬಿಳಿ ಮೊಟ್ಟೆ ಒಳ್ಳೆಯದಾ..?; ತಜ್ಞರು ಏನು ಹೇಳುತ್ತಾರೆ..?

 

Share Post