BengaluruCrime

ತಂದೆಯಿಂದಲೇ ಮಗನ ಭೀಕರ ಕೊಲೆ!

ಬೆಂಗಳೂರು; ಬೆಂಗಳೂರಿನಲ್ಲಿ ಭೀಕರ ಕೊಲೆಯೊಂದು ನಡೆದಿದೆ.. ತಂದೆಯೇ ತನ್ನ ಮಗನನ್ನು ಕೊಲೆ ಮಾಡಿದ್ದಾರೆ.. ಮಗನ ಕೈಕಾಲು ಕಟ್ಟಿ ಮಾರಕಾಸ್ತ್ರಗಳಿಂದ ಕೊಲೆ ಮಾಡಿದ್ದಾರೆ..

  ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.. ಲಿಂಗಪ್ಪ ಎಂಬಾತನೆ ಆರೋಪಿ.. ಅವರ ಮಗ ರಾಜೇಶ್ ಕೊಲೆಯಾದವನು.. ಮಗ ನಿತ್ಯ ಕುಡಿದು ಮನೆಗೆ ಬರುತ್ತಿದ್ದ.. ಇದರಿಂದ ಆಕ್ರೋಶಗೊಂಡ ತಂದೆ ಲಿಂಗಪ್ಪ ಕೊಲೆ ಮಾಡಿದ್ದಾರೆ. ಕೊಲೆಯಾದ ರಾಜೇಶ್ ನಿತ್ಯ ಮನೆಗೆ ಬಂದು ಮನೆಯವರಿಗೆ ಕಿರುಕುಳ ನೀಡುತ್ತಿದ್ದ ಎಂದು ಗೊತ್ತಾಗಿದೆ..

    ಮಗ ರಾಜೇಶ್ ಕಿರುಕುಳ ತಾಳಲಾರದೇ ಲಿಂಗಪ್ಪ ದಂಪತಿ ಪ್ರತ್ಯೇಕವಾಗಿ ವಾಸವಾಗಿದ್ದರು. ಆದರೆ ಅಲ್ಲಿಗೂ ಬಂದ ಮಗ ರಾಜೇಶ್ ತಂದೆ ತಾಯಿಗೆ ಕಿರುಕುಳ ನೀಡಿ ಹಲ್ಲೆ ನಡೆಸಲು ಮುಂದಾಗಿದ್ದಾನೆ. ಮಗನ ಕಾಟ ಸಹಿಸಲಾರದೇ ತಂದೆ ಲಿಂಗಪ್ಪ ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ.

Share Post