CrimeInternational

ಉಗ್ರ ಹಫೀಜ್‌ ಸಯೀದ್‌ ಭಾರತಕ್ಕೆ ಹಸ್ತಾಂತರಿಸಲ್ಲ; ಪಾಕಿಸ್ತಾನ

ಇಸ್ಲಾಮಾಬಾದ್; ಮುಂಬೈ ಮೇಲೆ 2008ರ ನವೆಂಬರ್‌ 26ರಂದು ಸರಣಿ ಬಾಂಬ್‌ ದಾಳಿ ನಡೆದಿತ್ತು. ಈ ಪ್ರಕರಣದ ಮಾಸ್ಟರ್‌ ಮೈಂಡ್‌ ಲಷ್ಕರ್‌ ಎ ತಯ್ಯಬಾ ಉಗ್ರ ಸಂಘಟನೆಯ ಹಫೀಸ್‌ ಸಯೀದ್‌. ಈತ ಪಾಕಿಸ್ತಾನದಲ್ಲಿದ್ದಾನೆ. ಈತನನ್ನು ಹಸ್ತಾಂತರ ಮಾಡುವಂತೆ ಭಾರತ ಪಾಕಿಸ್ತಾನಕ್ಕೆ ಆಗ್ರಹ ಮಾಡಿತ್ತು. ಆದ್ರೆ ಪಾಕಿಸ್ತಾನ ಇದನ್ನು ನಿರಾಕರಣೆ ಮಾಡಿದೆ.

ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ವಕ್ತಾರೆ ಮುಮ್ತಾಜ್ ಝಹ್ರಾ ಬಲೂಚ್  ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಹಫೀಜ್ ಸಯೀದ್ ಹಸ್ತಾಂತರಕ್ಕೆ ಭಾರತ ಮನವಿ ಮಾಡಿದೆ. ಆದರೆ, ಹಪೀಸ್‌ ಸಯೀದ್‌ನನ್ನು ಭಾರತಕ್ಕೆ ಹಸ್ತಾಂತರಿಸಲು ಸಾಧ್ಯವಿಲ್ಲ. ದ್ವಿಪಕ್ಷೀಯ ಹಸ್ತಾಂತರ ಒಪ್ಪಂದ ಎರಡೂ ರಾಷ್ಟ್ರಗಳ ನಡುವೆ ಅಸ್ತಿತ್ವದಲ್ಲಿಲ್ಲ ಎಂದು ಅವರು ಹೇಳಿದ್ದಾರೆ.

 

Share Post