CrimeDistricts

ದೇಗುಲದ ಕಟ್ಟೆ ಮೇಲೆ ಮಲಗಿದ್ದ ವ್ಯಕ್ತಿಯ ಬರ್ಬರ ಹತ್ಯೆ!

ಬೆಳಗಾವಿ; ಜಮೀನು ವಿವಾದದ ಹಿನ್ನೆಲೆಯಲ್ಲಿ ದೇವಸ್ಥಾನದ ಕಟ್ಟೆಯ ಮೇಲೆ ಮಲಗಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.. ಬೆಳಗಾವಿ ಜಿಲ್ಲೆ ಗೋಕಾಕ ತಾಲ್ಲೂಕಿನ ಮಮದಾಪುರ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.. 47 ವರ್ಷದ ಮಡ್ಡೆಪ್ಪ ಎಂಬಾತನೇ ಕೊಲೆಯಾದ ವ್ಯಕ್ತಿಯಾಗಿದ್ದಾನೆ.

ಇದನ್ನೂ ಓದಿ; ಮ್ಯೂಸಿಯಂನಲ್ಲಿ 15 ಕೋಟಿ ಮೌಲ್ಯದ ಚಿನ್ನ ಕದ್ದ; ಮುಂದೆ ಆಗಿದ್ದೇನು..?

ಮಡ್ಡೆಪ್ಪ ಅವರು ಮಮದಾಪುರ ಗ್ರಾಮದ ಬೀರನಸಿದ್ದೇಶ್ವರ ದೇವಸ್ಥಾನದ ಕಟ್ಟೆಯ ಮೇಲೆ ಮಲಗಿದ್ದರು.. ಈ ವೇಳೆ ವೀರಪ್ಪ ಸಿದ್ದಪ್ಪ ಸುಣಧೋಳಿ ಎಂಬಾತ ಮಾರಕಾಸ್ತ್ರದಿಂದ ದಾಳಿ ಮಾಡಿದ್ದಾನೆ.. ಇದರಿಂದಾಗಿ ದೇವಸ್ಥಾನದ ಕಟ್ಟೆ ತುಂಬಾ ರಕ್ತಸಿಕ್ತವಾಗಿದೆ.. ತೀವ್ರವಾಗಿ ಗಾಯಗೊಂಡಿದ್ದ ಮಡ್ಡೆಪ್ಪನನ್ನು ಕೂಡಲೇ ಗ್ರಾಮಸ್ಥರು ಜಿಲ್ಲಾಸ್ಪತ್ರೆಗೆ ಸೇರಿಸಿದ್ದರು.. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.. ಗೋಕಾಕ್‌ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ..

ಇದನ್ನೂ ಓದಿ; ಚಾರ್ಜ್‌ಶೀಟ್‌ನಲ್ಲಿ ದರ್ಶನ್‌ ಪಾತ್ರದ ಬಗ್ಗೆ ಏನೆಲ್ಲಾ ಹೇಳಲಾಗಿದೆ..?

Share Post