BengaluruCrime

ಕಂಬದಲ್ಲಿ ಪ್ರವಹಿಸಿದ ವಿದ್ಯುತ್‌; ಮುಟ್ಟಿದ ಯುವತಿ ಬಲಿ

ಬೆಂಗಳೂರು; ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಯುವತಿಯೊಬ್ಬಳು ಬಲಿಯಾಗಿದ್ದಾಳೆ. ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾಪುರದಲ್ಲಿ ಈ ಘಟನೆ ನಡೆದಿದೆ. 23 ವರ್ಷದ ಅಖಿಲಾ ಮೃತ ಯುವತಿ. ಮಾರತ್​​ಹಳ್ಳಿಯಿಂದ ವರ್ತೂರು ಕೋಡಿ ಮಾರ್ಗ ಮಧ್ಯೆ ರಾತ್ರಿ 9.30ಕ್ಕೆ ಈ ಅವಘಡ ಸಂಭವಿಸಿದೆ.

ಮೃತ ಯುವತಿ ಅಖಿಲಾ ಕಳೆದ ಎರಡು ವರ್ಷಗಳಿಂದ ಖಾಸಗಿ ಕಾಲೇಜ್​​ನಲ್ಲಿ ಅಡ್ಮಿನಿಸ್ಟ್ರೇಷನ್ ಡಿಪಾರ್ಟ್​ಮೆಂಟ್​ನಲ್ಲಿ ಕೆಲಸ ಮಾಡಿಕೊಂಡಿದ್ದರು. ತಂದೆ ತಾಯಿ ಜೊತೆಗೆ ಸಿದ್ದಾಪುರದಲ್ಲಿ ವಾಸವಾಗಿದ್ದರು. ನೀರು ಹೆಚ್ಚಾಗಿದ್ದರಿಂದ ಸ್ಕೂಟರ್ ಆಫ್ ಆಗಿ ಬೀಳುವ ಸಮಯದಲ್ಲಿ ಸಹಾಯಕ್ಕೆ ಬಲ ಭಾಗದಲ್ಲೇ ಇದ್ದ ಎಲೆಕ್ಟ್ರಿಕಲ್ ಪೋಲ್ (ವಿದ್ಯುತ್ ಕಂಬ) ಮುಟ್ಟಿದ್ದಾರೆ. ಈ ವೇಳೆ ವಿದ್ಯುತ್ ಸ್ಪರ್ಶವಾಗಿ ಮೃತರಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

Share Post