CrimeDistricts

ಸೀರೆ ಎಳೆದಾಡಿದ ವ್ಯಕ್ತಿ; ಮನನೊಂದು ಮಹಿಳೆ ಆತ್ಮಹತ್ಯೆ

ಯಾದಗಿರಿ; ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಿಂದ ಬೇಸತ್ತ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಸುರಪುರದ ಕುಚಕನೂರಿನಲ್ಲಿ ಮೂವತ್ತು ವರ್ಷದ ವಿಜಯಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾರೆ.

ಕೊಳಚೆ ನೀರಿನ ವಿಚಾರವಾಗಿ ಅಕ್ಕಪಕ್ಕದ ಮನೆಯವರ ನಡುವೆ ಜಗಳವಾಗಿದೆ. ಈ ವೇಳೆ ವ್ಯಕ್ತಿಯೊಬ್ಬ ಮಹಿಳೆಯ ಸೀರೆ ಎಳೆದಾಡಿದ್ದಾನೆ. ಇದರಿಂದ ಮನನೊಂದು ವಿಜಯಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಇದರಿಂದ ಆಕ್ರೋಶಗೊಂಡ ಕುಟುಂಬಸ್ಥರು, ಮಹಿಳೆಯ ಶವವನ್ನು ಹುಣಸಗಿ ಪೊಲೀಸ್‌ ಠಾಣೆ ಮುಂದಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳನ್ನು ಬಂಧಿಸುವಂತೆ ಆಗ್ರಹ ಮಾಡಿದ್ದಾರೆ.

ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಇಂದ್ರಮ್ಮ, ಹಣಮಂತರಾಯ, ಪುಷ್ಪಾ ಹಾಗೂ ಶಶಿಕಲಾ ಅವರನ್ನ ಬಂಧಿಸುವಂತೆ ಆಗ್ರಹ ಕೇಳಿಬಂದಿದೆ.

 

Share Post