CrimeDistricts

ಜಮೀನು ದಾರಿಗೆ ಕಲ್ಲು ಹಾಕಿದ ವ್ಯಕ್ತಿ; ಪ್ರಶ್ನಿಸಿದ್ದಕ್ಕೆ ಗ್ರಾಪಂ ಮಾಜಿ ಅಧ್ಯಕ್ಷನ ಮರ್ಡರ್‌!

ಬೀದರ್; ಜಮೀನಿಗೆ ಹೋಗುವ ದಾರಿಗೆ ಅಡ್ಡಲಾಗಿ ಕಲ್ಲುಗಳನ್ನು ಹಾಕಿದ್ದರು. ಇದನ್ನು ನೋಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಪ್ರಶ್ನೆ ಮಾಡಿದ್ದಾರೆ. ಇದ್ರಿಂದ ಕುಪಿತಗೊಂಡ ಗುಂಪೊಂದು ಮಚ್ಚಿನಿಂದ ಹಲ್ಲೆ ಮಾಡಿ, ಗ್ರಾಪಂ ಮಾಜಿ ಅಧ್ಯಕ್ಷನನ್ನು ಕೊಲೆ ಮಾಡಿದೆ. ಬೀದರ್‌ ಜಿಲ್ಲೆ ಚಿಟ್ಟಗುಪ್ಪದ ನಿರ್ಣಾ ಗ್ರಾಮದಲ್ಲಿ ಈ ಕೃತ್ಯ ಎಸಗಲಾಗಿದೆ.

ನಲವತ್ತಾರು ವರ್ಷದ ಮಲ್ಲಿಕಾರ್ಜುನ್‌ ಎಂಬುವವರೇ ಹತ್ಯೆಯಾದವರು. ಮಲ್ಲಿಕಾರ್ಜುನ್‌ ಮಗನ ಮೇಲೂ ಮಾರಕಾಸ್ತ್ರಗಳಿಂದ ದಾಳಿ ಮಾಡಲಾಗಿದೆ. ಆತನಿಗೂ ತೀವ್ರ ಗಾಯಗಳಾಗಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ಇದೇ ಗ್ರಾಮದ ಲಿಂಗರಾಜು, ಕಾಶಿನಾಥ್, ಜಗನಾಥ್ ಹಾಗೂ ಐದಾರು ಮಂದಿ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.

ಮನ್ನಾಖೇಳಿ ಠಾಣೆ ಪೊಲೀಸರು ಈಗಾಗಲೇ ಆರು ಆರೋಪಿಗಳನ್ನು ಅರೆಸ್ಟ್‌ ಮಾಡಿದ್ದಾರೆ. ಉಳಿದವರು ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

 

Share Post