CrimeDistricts

ಹಾಡಹಗಲೇ ಯುವಕನನ್ನು ಅಟ್ಟಾಡಿಸಿ ಕೊಲೆ ಮಾಡಿದ ದುಷ್ಕರ್ಮಿಗಳು!

ಬೆಳಗಾವಿ; ಬೆಳ್ಳಂಬೆಳಗ್ಗೆಯೇ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಅಟ್ಟಾಡಿಸಿ ಕೊಲೆ ಮಾಡಲಾಗಿದೆ.. ಬೆಳಗಾವಿ ಜಿಲ್ಲೆ ಮೂಡಲಗಿ ತಾಲ್ಲೂಕಿನ ಲಕ್ಷ್ಮೇಶ್ವರ ಬಳಿ ಈ ಕೃತ್ಯ ಎಸಗಲಾಗಿದೆ..
ಇದನ್ನೂ ಓದಿ; ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೇಣಿಗೆ ಶರಣು!; ಇಷ್ಟು ಸಣ್ಣ ಕಾರಣಕ್ಕೆ ಸಾಯಬೇಕಾ..?

ಮಚ್ಚು, ಲಾಂಗುಗಳೊಂದಿಗೆ ಬಂದ ದುಷ್ಕರ್ಮಿಗಳು ವ್ಯಕ್ತಿಯೊಬ್ಬ ಮೇಲೆ ಏಕಾಏಕಿ ದಾಳಿ ಮಾಡಿದ್ದು, ಕೊಚ್ಚಿ ಕೊಚ್ಚಿ ಕೊಲೆ ಮಾಡಿದಾರೆ.. ಲಕ್ಷ್ಮೇಶ್ವರ ನಿವಾಸಿ 28 ವರ್ಷದ ಮೋಮಿನ್‌ ಕೊಲೆಯಾದ ವ್ಯಕ್ತಿಯಾಗಿದ್ದಾನೆ.. ದುಷ್ಕರ್ಮಿಗಳು ಯಾರು..? ಯಾಕೆ ಕೊಲೆ ಮಾಡಿದರು ಅನ್ನೋದು ಇನ್ನೂ ಗೊತ್ತಾಗಿಲ್ಲ.. ಆದ್ರೆ ಕ್ಷಣಾರ್ಧದಲ್ಲಿ ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ..

ಇದನ್ನೂ ಓದಿ; ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿ ಅಪಹರಣ!; ದಾರಿಮಧ್ಯೆ ತಪ್ಪಿಸಿಕೊಂಡಿದ್ದೇ ರೋಚಕ!

ಕೊಲೆಗೆ ಬಳಸಿದ ಲಾಂಗ್‌, ಮಚ್ಚುಗಳನ್ನು ಸ್ಥಳದಲ್ಲೇ ಬಿಸಾಡಿಹೋಗಿದ್ದಾರೆ.. ಈ ಘಟನೆಯಿಂದಾಗಿ ಲಕ್ಷ್ಮೇಶ್ವರ ಗ್ರಾಮದ ಜನರು ಬೆಚ್ಚಿಬಿದ್ದಿದ್ದಾರೆ.. ಕುಲಗೋಡು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.. ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ..

ಇದನ್ನೂ ಓದಿ; ಮಳೆಗಾಲದಲ್ಲಿ ಫುಡ್‌ ಪಾಯ್ಸನ್‌ ಆಗೋದು ಜಾಸ್ತಿ!; ಆಹಾರ ಸೇವನೆ ಬಗ್ಗೆ ಎಚ್ಚರಿಕೆ ಇರಲಿ..!

Share Post