CrimeNationalPolitics

ಪ್ರಧಾನಿ ಕೊಲ್ಲಬೇಕು ಎಂಬ ಹೇಳಿಕೆ; ಕಾಂಗ್ರೆಸ್‌ ಮಾಜಿ ಸಚಿವ ಅರೆಸ್ಟ್‌

ಭೋಪಾಲ್‌; ಸಂವಿಧಾನ ಉಳಿಸಲು ಪ್ರಧಾನಿ ಮೋದಿ ಹತ್ಯೆಯಾಗಬೇಕು ಎಂಬ ರೀತಿಯಲ್ಲಿ ಮಾತನಾಡಿದ್ದ ಕಾಂಗ್ರೆಸ್‌ ಮಾಜಿ ಸಚಿವ ರಾಜಾ ಪಟೇರಿಯಾರನ್ನು ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಸಭೆಯೊಂದರಲ್ಲಿ ಮಾತನಾಡಿದ್ದ ಪಟೇರಿಯಾ ಅವರು, ಸಂವಿಧಾನವನ್ನು ಉಳಿಸಲು ಪ್ರಧಾನಿ ಮೋದಿಯನ್ನು ಕೊಲ್ಲಬೇಕು ಎಂದಿದ್ದರು.

ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಪಟೇರಿಯಾ ಅವರ ಹೇಳಿಕೆಗಳನ್ನು ಆಧರಿಸಿ, ಮಧ್ಯಪ್ರದೇಶ ಸರ್ಕಾರ ಮಾಜಿ ಸಚಿವರ ವಿರುದ್ಧ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿತ್ತು. ಅದರ ಆಧಾರದ ಮೇಲೆ ಪಟೇರಿಯಾ ಅವರನ್ನು ಬಂಧಿಸಲಾಗಿದೆ.

Share Post