CrimeDistricts

3 ವರ್ಷದ ಬಾಲಕನ ಕತ್ತು ಸೀಳಿ ಕೊಂದ ಚಿಕ್ಕಪ್ಪ!

ಚಿಕ್ಕಬಳ್ಳಾಪುರ; ಸ್ವಂತ ಚಿಕ್ಕಪ್ಪನೇ 3 ವರ್ಷದ ಬಾಲಕನ ಕತ್ತು ಸೀಳಿ ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ.. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ನಂದಿಗಾನಹಳ್ಳಿಯಲ್ಲಿ ಈ ಘಟನೆ ನಡೆದಿದೆ..

  ಮೂರು ವರ್ಷದ ಮಗು ಗೌತಮ್ ಕೊಲೆಯಾದ ಬಾಲಕ.. ಈತ ನಿಮ್ಮಕಾಯಲಹಳ್ಳಿ ಗ್ರಾಮದ ಶಿರೀಶ ಹಾಗೂ ಮಂಜುನಾಥ್ ದಂಪತಿಯ ಪುತ್ರನಾಗಿದ್ದಾನೆ. ಗೌತಮ್ ನನ್ನು ಸ್ವಂತ ಚಿಕ್ಕಪ್ಪ ರಂಜಿತ್ ಎಂಬಾತ ಕೊಲೆ ಮಾಡಿ ಪರಾರಿಯಾಗಿದ್ದಾನೆ..

  ಮಂಜುನಾಥ್ ಅವರ ಚಿಕ್ಕಪ್ಪನ ಮಗನಾದ ರಂಜಿತ್ ಇಂಜಿನಿಯರಿಂಗ್ ಮಾಡಿದ್ದಾನೆ.. ಊರಿನಲ್ಲಿ ಮನೆ ಕಟ್ಟಿಸುತ್ತಿದ್ದ ಆತ ಮಂಜುನಾಥ್ ಮನೆಯಲ್ಲೇ ಇದ್ದ.. ನಿನ್ನೆ ಸಂಜೆ ಊಟದ ನಂತರ ಬಾಲಕ ಗೌತಮ್ ನನ್ನು ಪಾಳುಬಿದ್ದ ಮನೆಯೊಂದಕ್ಕೆ ಕರೆದೋಯ್ದು ಕೊಲೆ ಮಾಡಿದ್ದಾನೆ.. ಕೃತ್ಯಕ್ಕೆ ಕಾರಣ ಗೊತ್ತಾಗಿಲ್ಲ..

   ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಡಿ. ಎಲ್. ನಾಗೇಶ್, ಅಡಿಷನಲ್ ಎಸ್ಪಿ ಖಾಸಿಂ ಖಾನ್, ಡಿ ವೈ ಎಸ್ ಪಿ. ಪಿ ಮುರಳೀಧರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ..

 

Share Post