CrimeNational

ಆಂಧ್ರಪ್ರದೇಶದಲ್ಲಿ ಟ್ರಕ್‌ ಗುದ್ದಿ ಮೂರು ಆನೆಗಳ ದಾರುಣ ಸಾವು..!

ಚಿತ್ತೂರು; ಆಂಧ್ರ ಪ್ರದೇಶದ ಚಿತ್ತೂರು ಬಳಿ ಭೀಕರ ಅಪಘಾತವೊಂದು ನಡೆದಿದ್ದು, ಟ್ರಕ್‌ ಗುದ್ದಿ ಮೂರು ಆನೆಗಳು ದಾರುಣವಾಗಿ ಸಾವನ್ನಪ್ಪಿವೆ. ಜಗಮರ್ಲ ಕ್ರಾಸ್‌ನಲ್ಲಿ ಕಳೆದ ರಾತ್ರಿ ಆನೆಗಳ ಹಿಂಡು ರಸ್ತೆ ದಾಟುತ್ತಿತ್ತು. ಈ ವೇಳೆ ವೇಗವಾಗಿ ಬಂದ ಟ್ರಕ್ ಆನೆಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಟ್ರಕ್‌ ಮುಂಭಾಗ ನಜ್ಜುಗುಜ್ಜಾಗಿದೆ. ಚಾಲಕನ ಅತಿವೇಗದ ಚಾಲನೆಯೇ ಈ ದುರಂತಕ್ಕೆ ಕಾರಣ ಎಂದು ತಿಳಿದುಬಂದಿದೆ.

ಅಪಘಾತದ ನಂತರ ಟ್ರಕ್‌ ಚಾಲಕ ನಾಪತ್ತೆಯಾಗಿದ್ದಾನೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸ್ತೇವೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಹೆದ್ದಾರಿಯಲ್ಲಿ ವಾಹನಗಳನ್ನು ರಾತ್ರಿ ವೇಳೆ ಅತಿ ವೇಗವಾಗಿ ಚಲಾಯಿಸಲಾಗುತ್ತದೆ. ಜೊತೆಗೆ ಚಾಲಕರು ಅಜಾಗರೂಕತೆಯಿಂದ ಇರುತ್ತಾರೆ. ಈ ಕಾರಣಕ್ಕಾಗಿ ಇಂತಹ ಘಟನೆಗಳು ನಡೆಯುತ್ತಿವೆ. ಕಾಡಿನ ಪ್ರದೇಶದಲ್ಲಿ ವಾಹನಗಳಿಗೆ ವೇಗದ ಮಿತಿ ಅಳವಡಿವಬೇಕಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.

Share Post