CrimeNational

ನಿಂತಿದ್ದ ಬಸ್‌ಗಳಿಗೆ ಟ್ರಕ್‌ ಡಿಕ್ಕಿ; ಎಂಟು ಮಂದಿ ದಾರುಣ ಸಾವು..!

ಭೋಪಾಲ್; ಟೈರ್‌ ಸ್ಫೋಟಗೊಂಡಿದ್ದ ನಿಯಂತ್ರಣ ತಪ್ಪಿ ಟ್ರಕ್‌ ಒಂದು ನಿಂತಿದ್ದ ಎರಡು ಬಸ್‌ಗಳಿಗೆ ಡಿಕ್ಕಿ ಹೊಡೆದಿದ್ದು, ದುರಂತದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶದ ಸಿಧಿ ಎಂಬಲ್ಲಿ ಈ ದುರಂತ ನಡೆದಿದೆ. ಘಟನೆಯಲ್ಲಿ ಹಲವು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೊಹಾನಿಯಾ ಸುರಂಗದ ಸಮೀಪ ಬರ್ಖಾಡ ಗ್ರಾಮದ ಬಳಿ ಬಸ್‌ಗಳನ್ನು ರಸ್ತೆ ಬದಿ ನಿಲ್ಲಿಸಲಾಗಿತ್ತು. ಅಮಿತ್‌ ಶಾ ರ್ಯಾಲಿ ಮುಗಿಸಿ ಹಿಂತಿರುಗುತ್ತಿದ್ದ ಜನರು ಆ ಬಸ್‌ಗಳಲ್ಲಿದ್ದರು. ಹಿಂದಿನಿಂದ ಬರುತ್ತಿದ್ದ ಟ್ರಕ್‌ ಟೈರ್‌ ಸ್ಫೋಟಗೊಂಡಿದ್ದು, ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆ ಟ್ರಕ್‌ ನಿಂತಿದ್ದ ಬಸ್‌ಗಳಿಗೆ ಡಿಕ್ಕಿ ಹೊಡೆದಿದೆ.

ಬಸ್‌ಗಳು ನಜ್ಜುಗುಜ್ಜಾಗಿವೆ. ಘಟನೆಯಲ್ಲಿ ಐವತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

Share Post