CrimeDistricts

ಚಾಕುವಿನಿಂದ ಇರಿದು ವೈಷ್ಣವಿ ದೇಗುಲದ ಪೂಜಾರಿಯ ಕೊಲೆ!

ಹುಬ್ಬಳ್ಳಿ; ವೈಷ್ಣವಿ ದೇವಸ್ಥಾನದ ಪೂಜಾರಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.. ಹುಬ್ಬಳ್ಳಿಯ ಈಶ್ವರ ನಗರದಲ್ಲಿ ಈ ಕೃತ್ಯ ಎಸಗಲಾಗಿದ್ದು, ಹುಬ್ಬಳ್ಳಿಯ ನವನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ; ದಿನಕ್ಕೆ ಎರಡು ಖರ್ಜೂರ ತಿಂದರೆ ಸಾಕು ಫುಲ್‌ ಎನರ್ಜಿ ನಿಮ್ಮದಾಗುತ್ತೆ!

ವೈಷ್ಣವಿ ದೇವಸ್ಥಾನದ ಪೂಜಾರಿ ದೇವಪ್ಪಜ್ಜ ಎಂಬುವವರೇ ಹತ್ಯೆಯಾದವರು.. ಪೂಜಾರಿ ಮೇಲೆ ದಾಳಿ ಮಾಡಿದ ನಂತರ ದುಷ್ಕರ್ಮಿಗಳು ಅಲ್ಲಿಂದ ಎಸ್ಕೇಪ್‌ ಆಗಿದ್ದಾರೆ.. ಒಂದು ವರ್ಷದ ಹಿಂದೆ ಕೂಡಾ ಇದೇ ರೀತಿ ಪೂಜಾರಿ ಮೇಲೆ ದಾಳಿ ನಡೆದಿತ್ತು.. ಆದ್ರೆ ಅಂದು ದೇವಪ್ಪಜ್ಜ ಪ್ರಾಣಾಪಾಯದಿಂದ ಪಾರಾಗಿದ್ದರು.. ಆದ್ರೆ ಈ ಬಾರಿ ದುಷ್ಕರ್ಮಿಗಳು ಕೊಲೆ ಮಾಡಿದ ಅದನ್ನು ದೃಢಪಡಿಸಿಕೊಂಡು ಪರಾರಿಯಾಗಿದ್ದಾರೆ.. ಈ ದಾಳಿಗೆ ಕಾರಣ ಏನು ಅನ್ನೋದು ಇನ್ನೂ ಗೊತ್ತಾಗಿಲ್ಲ..

ಇದನ್ನೂ ಓದಿ; ಯಾಕೋ ಗುರಾಯಿಸ್ತೀಯಾ ಅಂದಿದ್ದಕ್ಕೆ ನಡೆದೇ ಹೋಯ್ತು ಕೊಲೆ!

ಹುಬ್ಬಳ್ಳಿಯ ನವನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ..

Share Post