BengaluruCrimePolitics

ವಾಲ್ಮೀಕಿ ನಿಗಮ ಹಗರಣ; ಮಾಜಿ ಸಚಿವ ನಾಗೇಂದ್ರ ಪಿಎ ಹರೀಶ್ ಅರೆಸ್ಟ್‌

ಬೆಂಗಳೂರು; ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟಿ ಕೋಟಿ ಹಗರಣದ ಹಿನ್ನೆಲೆಯಲ್ಲಿ ಇಂದು ಮಾಜಿ ಸಚಿವ ನಾಗೇಂದ್ರ ಅವರ ಬಳ್ಳಾರಿ ಹಾಗೂ ಬೆಂಗಳೂರಿನ ನಿವಾಸಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.. ಇದೇ ವೇಳೆ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರ ಅವರ ಪಿಎ ಹರೀಶ್‌ರನ್ನು ಬಂಧಿಸಿದ್ದಾರೆ.‌

ಇದನ್ನೂ ಓದಿ; ಮಣ್ಣು ಕುಸಿದಿದ್ದರಿಂದ ಸಿಲುಕಿದ ಲಾರಿ!; ಜೆಸಿಬಿಯಿಂದ ತೆಗೆಯುವ ಪ್ರಪಾತಕ್ಕೆ ಲಾರಿ ಪಲ್ಟಿ!

ಇಂದು ಇಡಿ ಅಧಿಕಾರಿಗಳು ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ ಅವರ ರಾಯಚೂರು ಹಾಗೂ ಬೆಂಗಳೂರಿನ ನಿವಾಸಗಳ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ಇನ್ನು ನಾಗೇಂದ್ರ ಅವರ ಬಳ್ಳಾರಿ ಹಾಗೂ ಬೆಂಗಳೂರಿನ ಡಾಲರ್ಸ್‌ ಕಾಲೋನಿ ನಿವಾಸದಲ್ಲಿ ಶೋದ ಕಾರ್ಯ ನಡೆಸಲಾಗಿದೆ.. ವಾಲ್ಮೀಕಿ ನಿಗಮದ ಸುಮಾರು 180 ಕೋಟಿ ರೂಪಾಯಿಯನ್ನು ಅನಧಿಕೃತ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪವಿದೆ.. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗುತ್ತಿದೆ..

ಇದನ್ನೂ ಓದಿ; ಮೊಮ್ಮಗ ಆತ್ಮಹತ್ಯೆ ಮಾಡಿಕೊಂಡ; ಮೃತದೇಹ ನೋಡಿದ ಅಜ್ಜನಿಗೆ ಹೃದಯಾಘಾತ!

Share Post